Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಯಲಕ್ಷ್ಮೀ ಸೀತಾಪುರ ಇನ್ನಿಲ್ಲ
ಕರ್ನಾಟಕ

ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಯಲಕ್ಷ್ಮೀ ಸೀತಾಪುರ ಇನ್ನಿಲ್ಲ

Share
1 Min Read
SHARE

newsics.com

ಮೈಸೂರು: ಕರ್ನಾಟಕದ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಯಲಕ್ಷ್ಮೀ ಸೀತಾಪುರ ಅಪಘಾತದಲ್ಲಿ ಸಾವನಪ್ಪಿದ್ದಾರೆ.

ಕಳೆದ ವಾರ ಅವರು ಬೆಂಗಳೂರಿಗೆ‌ ಕಾರಲ್ಲಿ ಹೊರಟಿದ್ದಾಗ ಇನ್ನೊಂದು ಕಾರು ಬಂದು‌ ಡಿಕ್ಕಿ ಹೊಡೆದ ಘಟನೆ ಮಂಡ್ಯದ ಬಳಿ ನಡೆದಿತ್ತು‌. ಗಾಯಗೊಂಡಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಹೃದಯಾಘಾತದಿಂದ ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರದವರಾದ ಡಾ.ಜಯಲಕ್ಷ್ಮೀ ಅವರ ಪತಿ ಡಾ.ರಾಜಶೇಖರ್
ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದು, ವಿದೇಶದಲ್ಲಿ ಇಬ್ಬರು ಪುತ್ರಿಯರು ಇದ್ದಾರೆ.

ಅವರ ಅಂತ್ಯಕ್ರಿಯೆ ಮಂಗಳವಾರ (ಜೂನ್ 18) ಮಧ್ಯಾಹ್ನ ಕುವೆಂಪು ನಗರದ ಕಾವೇರಿ ಶಾಲೆ ಹತ್ತಿರದ ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಡಾ.ಜಯಲಕ್ಷ್ಮೀ ಮೈಸೂರು ವಿಶ್ವವಿದ್ಯಾಲಯದಲ್ಲಿ ಜಾನಪದ ಎಂ.ಎ ಪದವಿ ಪಡೆದು, ಸಂಶೋಧನಾ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು. ನಂತರ ‘ಕನ್ನಡದಲ್ಲಿ ಐತಿಹಾಸಿಕ ಜಾನಪದ ಮಹಾಕಾವ್ಯಗಳು’ ಕುರಿತು ಪಿಎಚ್.ಡಿ ಪದವಿ ಪಡೆದರು. ಅಮೆರಿಕದ ಫೋರ್ಡ್ ಫೌಂಡೇಷನ್ ಫೆಲೋಶಿಪ್ ಗೆ ಆಯ್ಕೆಯಾಗಿದ್ದರು.

ನಂತರ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಜಾನಪದ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.

ಮುದ್ದು ಮಾದಪ್ಪ ಪುರಸ್ಕಾರ, ಜಾನಪದ ಲೋಕ ಪ್ರಶಸ್ತಿ ಪುರಸ್ಕೃತರಾಗಿದ್ದ‌ ಡಾ.ಜಯಲಕ್ಷ್ಮೀ ಹಲವಾರು ವಿದ್ಯಾರ್ಥಿಗಳಿಗೆ ಪಿಎಚ್.ಡಿ ಅಧ್ಯಯನಕ್ಕೆ ಮಾರ್ಗದರ್ಶಕರಾಗಿದ್ದರು. ಇವರಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜಿಶಂಪ ಪ್ರಶಸ್ತಿಯೂ ಲಭಿಸಿದೆ.

ಡಾ.ಪ್ರೀತಿ ಶುಭಚಂದ್ರ, ಡಾ.ಎಚ್.ಎಲ್.ಶೈಲಾ ಹಾಗೂ ಡಾ.ಎಚ್.ಗೌರಮ್ಮ ಅವರು ಸಂಪಾದಿಸಿದ ‘ಜಾನಪದ ಮಹಿಳಾಯಾನ’ ಕೃತಿಯನ್ನು ಅವರಿಗೆ ಸಮರ್ಪಿಸಲಾಗಿತ್ತು.

ಹುಡುಗಿ ವೇಷದಲ್ಲಿದ್ದಾಗ ತುಂಬಾ ಮುಜುಗರ ಆಗ್ತಿತ್ತು‌… ಎಲ್ಲರೂ ಅದನ್ನೇ ನೋಡ್ತಿದ್ರು…!

ಜುಲೈ 22ಕ್ಕೆ ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ, ದಾಖಲೆ‌ ಮುರಿಯಲು ನಿರ್ಮಲಾ ಸೀತಾರಾಮನ್ ಸಜ್ಜು

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

TAGGED:#Renowned #folk scholar #Dr. Jayalakshmi Sitapur #passes away #newsics #karnataka #mysore
Share This Article
Facebook Twitter Copy Link Print
Previous Article ಸಾಗರ ಜೀವಿಗಳ ವಂಶಾಭಿವೃದ್ಧಿ: 2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟ ತಮಿಳುನಾಡು
Next Article 80 ವರ್ಷದ ಅಜ್ಜನಿಗೆ 22 ವರ್ಷದ ಯುವತಿ ಮೇಲೆ ಪ್ರೀತಿ, ಸಂಸಾರ ಶುರು!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?