newsics.com
ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಖ್ಯಾತಿಯ ಶರಣ್ಯ ಶೆಟ್ಟಿಗೆ ಬೇಡಿಕೆ ಹೆಚ್ಚಾಗಿದ್ದು, ಇದೀಗ ಟಾಲಿವುಡ್ನತ್ತ ಮುಖ ಮಾಡಿದ್ದಾರೆ.
ಹೌದು, ರಶ್ಮಿಕಾ ಮಂದಣ್ಣ , ಶ್ರೀಲೀಲಾ, ಆಶಿಕಾ ರಂಗನಾಥ್, ರುಕ್ಮಿಣಿ ವಸಂತ್ ತೆಲುಗಿನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಅದೇ ಹಾದಿಯಲ್ಲಿ ಶರಣ್ಯ ಶೆಟ್ಟಿ ಹೆಜ್ಜೆ ಇಡುತ್ತಿದ್ದಾರೆ. ತೆಲುಗಿನ ನಿರ್ಮಾಣ ಸಂಸ್ಥೆಯೊಂದು ನಟಿಯ ಜೊತೆ ಸಿನಿಮಾ ಮಾಡಲು ಮಾತುಕತೆ ನಡೆಸಿದೆ. ಅತೀ ಶೀಘ್ರದಲ್ಲಿ ಈ ಸಿನಿಮಾದ ಬಗ್ಗೆ ಘೋಷಣೆ ಆಗಲಿದೆ.
ಶರಣ್ಯ ಶೆಟ್ಟಿ ಚೊಚ್ಚಲ ತೆಲುಗು ಸಿನಿಮಾಗೆ ಅಲ್ಲಿನ ಸ್ಟಾರ್ ನಟರೊಬ್ಬರು ಹೀರೋ ಆಗಿ ಬಣ್ಣ ಹಚ್ಚಲಿದ್ದಾರೆ. ಅದು ಯಾರು ಎಂಬುದು ಇನ್ನೂ ರಿವೀಲ್ ಆಗಿಲ್ಲ. ಸದ್ಯ ನಟಿಯ ಬಗೆಗಿನ ಸಿನಿಮಾ ಗುಡ್ ನ್ಯೂಸ್ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.