newsics.com
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ ಕೋರ್ಟ್ ಗೆ ಹಾಜರಾಗಿದೆ.
ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಆಗಲು ದಿನಾಂಕ ನಿಗಧಿ ಮಾಡಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಪವಿತ್ರಾಗೌಡ ಜೈಲು ವಾಸದ 6 ತಿಂಗಳ ಬಳಿಕ ಇದೀಗ ಕೋರ್ಟ್ ನಲ್ಲಿ ಮುಖಾಮುಖಿಯಾಗಿದ್ದಾರೆ.
ಈ ವೇಳೆ ಪವಿತ್ರಾ ಗೌಡ ದರ್ಶನ್ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಇದೇ ವೇಳೆ ನಟ ದರ್ಶನ್ ಪವಿತ್ರಾ ಗೌಡ ಬೆನ್ನುತಟ್ಟಿ ಸಂತೈಸಿದ ಘಟನೆ ನಡೆದಿದೆ.
ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದು, ನ್ಯಾಯಾಲಯ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.