newsics.com
ಬೆಂಗಳೂರು: ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.
ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪಾಪಿಗಳ ಈ ಕೃತ್ಯಕ್ಕೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳದಲ್ಲಿ ಜನರು ಜಮಾವಣೆಗೊಂಡಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಘಟನೆಗೆ ಸಂಬಂಧಪಟ್ಟಂತೆ ಕಿಡಿಗೇಡಿಗಳನ್ನು ಬಂಧಿಸಿ ಕ್ರೂರ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Actor Darshan ಗನ್ ಲೈಸೆನ್ಸ್ ಬಗ್ಗೆ ಸ್ಪಷ್ಟನೆ ನೀಡುವಂತೆ ನಟ ದರ್ಶನ್ ನೋಟಿಸ್