newsics.com
ಬೆಂಗಳೂರು : ನಟ ದರ್ಶನ್ ಗೆ ಪೊಲೀಸರು ಮತ್ತೊಂದು ಶಾಕ್ ನೀಡಿದ್ದು, ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.
ಹೌದು ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ತಮ್ಮ ಬಳಿಯಿರುವ ಗನ್ ಲೈಸೆನ್ಸ್ ಬಗ್ಗೆ 1 ವಾರದಲ್ಲಿ ಸ್ಪಷ್ಟನೆ ನೀಡುವಂತೆ ಡಿಸಿಪಿ ಪದ್ಮಿನಿ ಸಾಹು ನೋಟಿಸ್ ನೀಡಿದ್ದಾರೆ. ಅಲ್ಲದೆ ಕೋರ್ಟ್ ಸಹ ನಟ ದರ್ಶನ್ ಅವರಿಗೆ ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ.
ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರೋದ್ರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.