newsics.com
ರಾಜಸ್ಥಾನ: ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರ ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
https://youtu.be/ZEoaoIGaQyo?si=anQ2BdO0gQLFtM2G
ಹೌದು,ನಿಗದಿತ ನಿಲ್ದಾಣದಲ್ಲಿ ಇಳಿಯಬೇಕಾದ ನಿವೃತ್ತ ಅಧಿಕಾರಿಯೊಬ್ಬರು ಮುಂದಿನ ನಿಲ್ದಾಣದಲ್ಲಿ ಇಳಿದ ಸಂದರ್ಭದಲ್ಲಿ ಬಸ್ ಕಂಡಕ್ಟರ್ ಹೆಚ್ಚುವರಿಯಾಗಿ 10 ರೂ. ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಬಸ್ ಕಂಡಕ್ಟರ್ ನನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ:
ನಿವೃತ್ತ ಅಧಿಕಾರಿ ಆರ್ಎಲ್ ಮೀನಾ ಅವರು ಆಗ್ರಾ ರಸ್ತೆಯಲ್ಲಿರುವ ಕನೋಟಾ ಬಸ್ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಮೀನಾ ಅವರಿಗೆ ಬಸ್ ನಿಲ್ದಾಣದ ಅರಿವಿಲ್ಲದೆ ಇಳಿಯಲಿಲ್ಲ ಬದಲಾಗಿ ಮುಂದಿನ ನಿಲ್ದಾಣವಾದ ನೈಲಾದಲ್ಲಿ ಇಳಿಯಲು ಯತ್ನಿಸಿದ್ದಾರೆ ಈ ವೇಳೆ ಬಸ್ ಕಂಡಕ್ಟರ್ ಹೆಚ್ಚುವರಿ 10 ರೂ. ನೀಡುವಂತೆ ಹೇಳಿದ್ದಾರೆ ಇದಕ್ಕೆ ಮೀನಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ ಜೊತೆಗೆ ಕಂಡಕ್ಟರ್ ನಿವೃತ್ತ ಅಧಿಕಾರಿಯನ್ನು ಮೊದಲು ತಳ್ಳಿದ್ದಾರೆ ಇದರಿಂದ ಕೋಪಗೊಂಡ ನಿವೃತ್ತ ಅಧಿಕಾರಿ ಕಂಡಕ್ಟರ್ ಗೆ ಕಪಾಳಮೋಕ್ಷ ಮಾಡಿದ್ದಾರೆ ಇದರಿಂದ ಸಿಟ್ಟಿಗೆದ್ದ ಕಂಡಕ್ಟರ್ ನಿವೃತ್ತ ಅಧಿಕಾರಿಯ ಮೇಲೆ ಮನಬಂದಂತೆ ಥಳಿಸಿದ್ದಾರೆ.