newsics.com
ಶಬರಿಮಲೆ: ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಿದ್ದಾನೆ.
ಸಂಜೆ 6:44ಕ್ಕೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು.
ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ ಪಡೆದರು.
ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆಗಳು ನಡೆದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನಕೊಟ್ಟಿದ್ದಾನೆ.