newsics.com
ಬೆಂಗಳೂರು : ಜೈಲಿಂದ ಹೊರ ಬಂದ ಬಳಿಕ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪೋಸ್ಟ್ ಶೇರ್ ಮಾಡಿದ್ದಾರೆ.
ನಟ ದರ್ಶನ್ ಅಭಿಮಾನಿಗಳಿಗೆ ಹಬ್ಬದ ಶುಭಕೋರಿದ್ದಾರೆ. ‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ನಟ ದರ್ಶನ್ ತಮ್ಮ ವರ್ಷದ ಮೊದಲ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ನೆಚ್ಚಿನ ಕುದುರೆ ಜೊತೆ ಇರುವ ಫೋಟೋವನ್ನು ನಟ ದರ್ಶನ್ ಪೋಸ್ಟ್ ಮಾಡಿದ್ದಾರೆ. ಬ್ಲ್ಯಾಕ್ ಟೀ ಶರ್ಟ್ ಧರಿಸಿರುವ ದಾಸ ಫೋಟೋಗೆ ಖಡಕ್ ಲುಕ್ ಕೊಟ್ಟಿದ್ದಾರೆ. ಜೊತೆಗೆ ಮೈಸೂರು ಬಳಿಯ ಫಾರ್ಮ್ಹೌಸ್ನಲ್ಲಿ ದರ್ಶನ್ ಸರಳವಾಗಿ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ್ದಾರೆ.
https://www.instagram.com/p/DEzvPITSrO3/?igsh=MWd0NnNrd2dkMm9wdA==