newsics.com
ಪೊನ್ನಂಪೇಟೆ(ಕೊಡಗು): ಪೊನ್ನಂಪೇಟೆ ತಾಲೂಕು ದೇವನೂರು- ಸುಳುಗೋಡು ಗ್ರಾಮದಲ್ಲಿ ಎರಡು ಗರ್ಭದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ಶನಿವಾರ ರಾತ್ರಿ ಹುಲಿ ದಾಳಿ ನಡೆಸಿದ್ದು, ಗ್ರಾಮದ ರೈತ ಮುದ್ದಿಯಡ ದಿನು ಅವರಿಗೆ ಸೇರಿದ ಎರಡು ಹಸುಗಳನ್ನು ಹುಲಿ ಕೊಂದು ಭಾಗಶಃ ತಿಂದಿದೆ.
ಸ್ಥಳಕ್ಕೆ ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಭೇಟಿ ನೀಡಿದ್ದರು. ಕೂಡಲೇ ಹುಲಿ ಸೆರೆ ಹಿಡಿಯಲು ಕಾರ್ಯಚರಣೆ ಕೈಗೊಳ್ಳುವಂತೆ ಹಾಗೂ ಗರ್ಭದ ಹಸು ಆಗಿರುವುದರಿಂದ ವಿಶೇಷ ಪ್ರಕರಣದಲ್ಲಿ ಕೂಡಲೇ ಪರಿಹಾರವನ್ನು ನೀಡಬೇಕೆಂದು ಸಂಕೇತ್ ಪೂವಯ್ಯ ಸೂಚಿಸಿದರು.
ಸಾಕಾನೆಗಳನ್ನು ಬಳಸಿ ಕಾಫಿ ಫಸಲಿಗೆ ನಷ್ಟವಾಗದಂತೆ ರಸ್ತೆಯ ಬದಿಯಲ್ಲಿ ಹುಲಿ ಸೆರೆಗೆ ಅರವಳಿಕೆ ನೀಡಿ ಕಾರ್ಯಚರಣೆ ಕೈಗೊಳ್ಳಲಾಗುವುದು. ಸಮೀಪದ ಅರಣ್ಯಕ್ಕೆ ಹುಲಿಯನ್ನು ಅಟ್ಟಲು ಕಾರ್ಯಚರಣೆಯನ್ನು ಸಹ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Mahakumbh ಮಹಾಕುಂಭ ಮೇಳ ಸುಂದರಿ ಮೊನಾಲಿಸಾ! ಸದ್ಯದ ಪಾಡು ಯಾರಿಗೂ ಬೇಡ! ವಿಡಿಯೋ ನೋಡಿ
Indian Gray Wolf ಬಂಕಾಪುರ ತೋಳಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್
Neeraj Chopra marriage ಹಿಮಾನಿ ಜತೆ ದಾಂಪತ್ಯ ಜೀವನ ಪ್ರವೇಶಿಸಿದ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ
Diabetes ಮಧುಮೇಹಿಗಳು ಖಾಲಿ ಹೊಟ್ಟೆಯಲ್ಲಿ ಚಹಾ, ಹಾಲು ಕುಡಿದರೆ ಏನಾಗತ್ತೆ?
BMW ಕಾರಿನಲ್ಲಿ ಬಂದು ಚಾಟ್ಸ್ ವ್ಯಾಪಾರ ಮಾಡ್ತಾರೆ ಕೋಟ್ಯಧಿಪತಿಯಾದ ಚಾಟ್ವಾಲಾ!