newsics.com
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.
ಅತೀಖ್ ಅಹ್ಮದ್ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು, ಅವರ ತಲೆಗೆ ಇನಾಮು ಘೋಷಿಸಿದೆ.
2022 ರ ಆಗಸ್ಟ್ನಲ್ಲಿ ಸ್ಥಳೀಯ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡಿದ್ದ NIA ತನಿಖೆಯ ಸಂದರ್ಭದಲ್ಲಿ, ‘PFI “PFI ಸೇವಾ ತಂಡಗಳು” ಎಂದು ಕರೆಯಲ್ಪಡುವ ರಹಸ್ಯ ತಂಡಗಳನ್ನು ರಚಿಸಿದೆ. ನೆಟ್ಟಾರು ಥರದವರನ್ನು ಗುರಿಯಾಗಿಸಿ ಹತ್ಯೆಗಳನ್ನು ನಡೆಸಲು ಶಸ್ತ್ರಾಸ್ತ್ರ ಮತ್ತು ಕಣ್ಗಾವಲು ತರಬೇತಿ ಪಡೆದಿದೆ’ ಎಂದು ತಿಳಿಸಿದೆ.