newsics.com
ಮಹಾ ಕುಂಭಮೇಳದಲ್ಲಿ ಜನ ಸಾಮಾನ್ಯರಿಂದ ಹಿಡಿದು ಸಂತರ ತನಕ ಜನ ಸಾಗರ ಕಿಕ್ಕಿರಿದು ತುಂಬಿದೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವಳಿ ಸಂಗಮದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿ ಶಿವನ ಭಕ್ತಿಯಲ್ಲಿ ಮುಳುಗಿದ್ದಾರೆ. ಇದರ ನಡುವೆ ಮೋನಾಲಿಸಾ ಎನ್ನುವ ಯುವತಿ ತನ್ನ ಸೌಂದರ್ಯದಿಂದ ಇಂಟರ್ನೆಟ್ನಲ್ಲಿ ಜನರ ಗಮನ ಸೆಳೆಯುತ್ತಿದ್ದಾರೆ.
ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಾವಿರಾರು ಸಾಧು-ಸಂತರ ನಡುವೆ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ಯುವತಿ ತನ್ನ ಸೌಂದರ್ಯ ಮತ್ತು ಕಣ್ಣುಗಳಿಂದ ನೆಟ್ಟಿಗರ ಗಮನ ಸೆಳೆಯುತ್ತಿದ್ದಾಳೆ. ಅಲ್ಲದೆ, ಈಕೆಗೆ ಇದೀಗ ಬಾಲಿವುಡ್ನಿಂದಲೂ ಆಫರ್ ಬರುತ್ತಿದ್ದೆ ಎನ್ನುವ ಸುದ್ದಿಗಳು ಪ್ರಸಾರವಾಗುತ್ತಿವೆ.. ಇದರ ನಡುವೆ ಸ್ಯಾಂಡಲ್ವುಡ್ಗೂ ಮೊನಾಲಿಸಾ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ..
ಹೌದು… ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿರುವ ಮೊನಾಲಿಸಾಗೆ ಕನ್ನಡ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ ಎನ್ನಲಾಗಿದೆ. ಡಾ. ಶಿವರಾಜ್ಕುಮಾರ್ ಅವರ ಮುಂಬರುವ ಸಿನಿಮಾದಲ್ಲಿ ಈ ನೈಜ ಸುಂದರಿ ಮುಖ್ಯಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾಳೆ ಎನ್ನಲಾಗಿದೆ..
ತೆಲುಗು ಸಿನಿಮಾದಲ್ಲಿ ಮೊನಾಲಿಸಾ ಕಾಣಿಸಿಕೊಳ್ಳುತ್ತಾಳೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮಧ್ಯಪ್ರದೇಶದ ಇಂದೋರ್ ಈ ಮೋನಾಲಿಸಾ ರಾಮ್ ಚರಣ್, ಶಿವರಾಜ್ಕುಮಾರ್ ನಟನೆಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಮಾಹಿತಿ ಇದೆ. ಬುಚ್ಚಿ ಬಾಬು ಸನಾ ನಿರ್ದೇಶನದ ಆರ್ಸಿ 16 ಚಿತ್ರದಲ್ಲಿ ರಾಮ್ ಚರಣ್ ನಾಯಕ ಮತ್ತು ಜಾನ್ವಿ ಕಪೂರ್ ಈಗಾಗಲೇ ನಾಯಕಿಯಾಗಿ ಫಿಕ್ಸ್ ಆಗಿದ್ದಾರೆ. ಇದೀಗ ಮೊನಾಲಿಸಾ ಹೆಸರು ಕೇಳಿ ಬರುತ್ತಿದೆ..