newsics.com
ಮೈಸೂರು: ಹಿರಿಯ ರಂಗಕರ್ಮಿ, ಅತೀವ ಸಾಂಸ್ಕೃತಿಕ, ಸಾಮಾಜಿಕ ಕಳಕಳಿ ಹೊಂದಿದ್ದ ಡಾ.ನ.ರತ್ನ (ನಟೇಶ ರತ್ನ)ಅವರು ಬುಧವಾರ ಬೆಳಗ್ಗೆ ಮೈಸೂರಿನಲ್ಲಿ ನಿಧನರಾದರು.
ವಯೋಸಹಜ ಅನಾರೋಗದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಡಾ.ನ. ರತ್ನ ಎಂದೇ ಪರಿಚಿತರಾಗಿದ್ದ ನಾಟಕಕಾರ ನಟೇಶ ರತ್ನ ಅವರು ಹುಟ್ಟಿದ್ದು ತಮಿಳುನಾಡಿನ ಚಿದಂಬರಂನಲ್ಲಿಯಾದರೂ ವಿದ್ಯಾಭ್ಯಾಸ ನಡೆಸಿದ್ದು ಮೈಸೂರಿನಲ್ಲಿ. ವೃತ್ತಿಯಲ್ಲಿ ವಾಕ್ಶ್ರವಣ ಚಿಕಿತ್ಸಾ ತಜ್ಞರಾಗಿದ್ದ ರತ್ನ ನಟರು ನಾಟಕಕಾರರೂ ಆಗಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ, ಬಿ.ಎಡ್ ಪದವಿ ಪಡೆದ ಇವರು ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಿದರು. ವಾಕ್ ಶ್ರವಣ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದರು.
ಹವ್ಯಾಸಿ ರಂಗಭೂಮಿಯ ಮೂಲಕ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಇವರು ಎಲ್ಲಿಗೆ, ಬೊಂತೆ, ಗೋಡೆ ಬೇಕೆ ಗೋಡೆ, ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ರೇಡಿಯೋ ನಾಟಕಗಳನ್ನೂ ನಿರ್ಮಿಸಿದ್ದಾರೆ. ರತ್ನ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಎಂ.ಎನ್. ರಾಯ್ ಪ್ರಶಸ್ತಿ, ಬಿ.ವಿ. ಕಾರಂತ ಪ್ರಶಸ್ತಿ, ಹೆಲನ್ ಕೆಲರ್ ಮುಂತಾದ ಪ್ರಶಸ್ತಿಗಳು ಸಂದಿವೆ.
ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ
ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್