ಚೆನ್ನೈ: ರಾಜ್ಯಸಭಾ ಸಂಸದರ ಮಗಳು ಪಾದಚಾರಿ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ತನ್ನ ಬಿಎಂಡಬ್ಲ್ಯೂ ಕಾರು ಹರಿಸಿ, ಆತ ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ರಾಜ್ಯಸಭಾ ಸಂಸದರ ಪುತ್ರಿಗೆ ಜಾಮೀನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪುಣೆಯ ಪೋಶೆ ಕಾರು ಅಪಘಾತದ ಒಂದು ತಿಂಗಳ ನಂತರ ನಡೆದ ಹೈಪ್ರೊಫೈಲ್ ಕೇಸ್ ಇದಾಗಿದೆ. ಆಂಧ್ರಪ್ರದೇಶದ ವೈಎಸ್ಆರ್ಸಿಪಿ ಸಂಸದ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ತಮ್ಮ ಸ್ನೇಹಿತರೊಟ್ಟಿಗೆ ಬಿಎಂಡಬ್ಲ್ಯೂ ಕಾರಿನಲ್ಲಿ ತೆರಳುತ್ತಿದ್ದಾಗ ಫುಟ್ಪಾತ್ನಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹತ್ತಿಸಿದ್ದಾರೆ, ಈ ವೇಳೆ ಕುಡಿದ ಮತ್ತಿನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಕುಡಿದ ಮತ್ತಿನಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಚೆನ್ನೈನ ಬೆಸೆಂಟ್ ನಗರದಲ್ಲಿ ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ 24 ವರ್ಷದ ಪೇಂಟರ್ ಸೂರ್ಯ ಎಂಬಾತನ ಮೇಲೆ ಕಾರು ಹರಿಸಿದ್ದಾರೆ. ಘಟನೆ ನಂತ್ರ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.