newsics.com
ಬಳ್ಳಾರಿ: ಖ್ಯಾತ ಮಕ್ಕಳ ವೈದ್ಯ ಬಳ್ಳಾರಿಯ ಡಾ.ಸುನೀಲ್ ಅವರನ್ನು ಅಪಹರಿಸಿರುವ ದುಷ್ಕರ್ಮಿಗಳು, ಆರು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ.
ಬಳ್ಳಾರಿಯ ಸೂರ್ಯನಾರಾಯಣ ನಗರದ ಶನೇಶ್ವರ ಗುಡಿ ಬಳಿ ವಾಕಿಂಗ್ಗೆ ಹೋಗಿದ್ದ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, 6 ಕೋಟಿ ರೂ. ಒತ್ತೆ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.
ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ಏಕಾಏಕಿ ದಾಳಿ ಮಾಡಿ ಬಾಯಿಮುಚ್ಚಿ ಕಾರಿನಲ್ಲಿ ಕೂರಿಸಿಕೊಂಡು ತೆರಳಿದ್ದಾರೆ ಎನ್ನಲಾಗಿದೆ.
ಶನಿವಾರ ಬೆಳಗ್ಗೆ ಈ ಕಿಡ್ನಾಪ್ ನಡೆದಿದೆ ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಬಳ್ಳಾರಿ ಪೊಲೀಸರು ತಿಳಿಸಿದ್ದಾರೆ.
Health Guide ಮಧ್ಯ ವಯಸ್ಕರಲ್ಲಿ ಹೆಚ್ಚುತ್ತಿದೆ ಹೃದಯಾಘಾತ, ಹೃದಯಸಂಬಂಧಿ ಕಾಯಿಲೆ! ಪಾರಾಗಲು ಹೀಗೆ ಮಾಡಿ
Lawyer Jagadeesh arrested ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಸೇರಿ ನಾಲ್ವರ ಬಂಧನ