newsics.com
ಹಲವು ಬದಲಾವಣೆಗಳಿಗೆ ಬಿಗ್ ಬಾಸ್ ಕನ್ನಡ 11ರ ಈ ಸೀಸನ್ ಸಾಕ್ಷಿಯಾಗಿದೆ. ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಇದು ತಮ್ಮ ಕೊನೆಯ ಸೀಸನ್ ಎಂದು ಈಗಾಗಲೇ ಘೋಷಿಸಿದ್ದಾರೆ.
ಈ ಸೀಸನ್ ಶುರುವಾಗುವ ಮುನ್ನ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುತ್ತಾರೋ ಇಲ್ಲವೋ ಎನ್ನುವುದು ದೊಡ್ಡ ಪ್ರಶ್ನೆ ಆಗಿತ್ತು. ಆದರೆ ಈ ಸೀಸನ್ ನಲ್ಲಿ ಸುದೀಪ್ ನಿರೂಪಣೆ ಮಾಡುವುದಾಗಿ ಬಿಗ್ ಬಾಸ್ ಪ್ರೋಮೋದ ಮೂಲಕ ತಿಳಿದುಬಂದಿತ್ತು.
ಕಳೆದ ವಾರ ಕಿಚ್ಚನ ಪಂಚಾಯಿತಿ ಬಳಿಕ ತಮ್ಮ ಕೊನೆಯ ಪಂಚಾಯಿತಿ ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಜತೆಗೆ ಬಿಗ್ ಬಾಸ್ ಅಭಿಮಾನಿಗಳು ಇದಕ್ಕೆ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.
ಆದರೆ ಇದೀಗ ಇನ್ನೊಂದು ಶಾಕ್ ಕೊಟ್ಟಿದ್ದು ಕಿಚ್ಚ ಸುದೀಪ್ ವಿದಾಯದೊಂದಿಗೆ ಬಿಗ್ ಬಾಸ್ ಧ್ವನಿಯೂ ವಿದಾಯ ಹೇಳಲಿದೆ. ಹೌದು, ಬಿಗ್ ಬಾಸ್ ಹಾಗೂ ಕಲರ್ಸ್ ಕನ್ನಡ ಹಾಗೂ ನಮ್ಮ ಮೆಟ್ರೋ ಧ್ವನಿಯಾಗಿಯೂ ಬಡೆಕ್ಕಿಲ ಪ್ರದೀಪ್ ಮನೆಮಾತಾಗಿದ್ದಾರೆ.
ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಧ್ವನಿಯಾಗಿಯೂ ಪ್ರದೀಪ್ ಅವರೇ ಇದ್ದಾರೆ ಎಂದು ಎಲ್ಲರೂ ಹೇಳುವುದು ಹೌದು. ಹೀಗಾಗಿ ಬಿಗ್ ಬಾಸ್ ಧ್ವನಿ ಎನ್ನಲಾಗುವ ಪ್ರದೀಪ್ ಅವರು ಕೂಡ ಬೆಂಗಳೂರನ್ನು ತೊರೆಯಲಿದ್ದು, ಕಿಚ್ಚ ಸುದೀಪ್ ವಿದಾಯದೊಂದಿಗೆ ಬಿಗ್ ಬಾಸ್ ಧ್ವನಿಯೂ ವಿದಾಯ ಹೇಳಲಿದೆ.
ಬಡೆಕ್ಕಿಲ ಪ್ರದೀಪ್ ಅವರು ಈಗಾಗಲೇ ಯೂ ಟ್ಯೂಬ್ ಚಾನೆಲ್ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ, ತಾವು ಅನಿವಾರ್ಯ ಕಾರಣಗಳಿಂದಾಗಿ ಹುಟ್ಟೂರು ಪುತ್ತೂರಿಗೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.
Bigg boss Kannada 11 ಈ ಬಾರಿಯೂ ಮಹಿಳಾ ಸ್ಪರ್ಧಿ ಬಿಗ್ ಬಾಸ್ ವಿನ್ನರ್ ಆಗಲೇ ಇಲ್ಲ!
BBK 11 Finale ಬಿಗ್ ಬಾಸ್ ಕನ್ನಡ 11 ಮನೆಯಿಂದ ಹೊರಬಂದ ಉಗ್ರಂ ಮಂಜು, ಮೋಕ್ಷಿತಾ ಪೈ, ಮುಂದಿನ ಸರದಿ ರಜತ್ ಕಿಶನ್?
King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ