newsics.com
ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಕಹಳೆ ಮೊಳಗಿಸುವ ಮೂಲಕ ಪ್ರತಿಮೆ ಲೋಕಾರ್ಪಣೆ ಮಾಡಿದ್ದಾರೆ.
ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿದ ಕೂಡಲೇ ಸಿಎಂ ಸಿದ್ದರಾಮಯ್ಯ ಕನ್ನಡಪರ ಹೋರಾಟಗಾರರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಕನ್ನಡಪರ ಹೋರಾಟಗಾರರ ಮೇಲಿರುವ ಎಲ್ಲಾ ಕೇಸ್ಗಳನ್ನ ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.
ಗೃಹ ಸಚಿವರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ಮುಂದೆ ಇದು ಚರ್ಚೆಯಾಗಬೇಕಾಗುತ್ತೆ. ಕನ್ನಡಪರ ಸಂಘಟನೆಗಳು ಯಾರ್ ಯಾರು ಅತಾ ಅರ್ಜಿ ನೀಡಿದರೆ ಕೇಸ್ ವಾಪಸ್ ಪಡೆಯುತ್ತೇವೆ. ನಮ್ಮ ಸರ್ಕಾರ ಕನ್ನಡಕ್ಕೆ ಅಗ್ರ ಸ್ಥಾನ ನೀಡಲಿದೆ ಎಂದು ಸಿಎಂ ಘೋಷಿಸಿದ್ದಾರೆ.