newsics.com
ಉತ್ತರ ಪ್ರದೇಶ : ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ ನಡೆದ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ತುರ್ತು ಸಭೆ ಕರೆದಿದ್ದಾರೆ. ದುರಂತದ ಬಗ್ಗೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮೃತರ ಸಂಖ್ಯೆ 17 ಕ್ಕೇರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಅವಘಡದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಘಟನೆ ನಡೆದಿದೆ. ಕೋಟ್ಯಂತರ ಭಕ್ತರು ಪುಣ್ಯ ಸ್ನಾನಕ್ಕಾಗಿ ಆಗಮಿಸಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ 17 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ