newsics.com
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಡೆದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಇಬ್ಬರು ಸಾವನ್ನಪ್ಪಿದ್ದಾರೆ.
ಬೆಳಗಾವಿ ಮೂಲದ ತಾಯಿ-ಮಗಳು ಕಾಲ್ತುಳಿದಲ್ಲಿ ಗಂಭೀರವಗೈ ಗಾಯಗೊಂಡಿದ್ದರು. ಇಬ್ಬರನ್ನೂ ಪ್ರಯಾಗ್ ರಾಜ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಲ್ಲದೆ, ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈವರೆಗೆ ರಾಜ್ಯದ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.
ಬೆಳಗಾವಿಯ ವಡಗಾವ ನಿವಾಸಿ ಜ್ಯೋತಿ ಹತ್ತರವಾಠ (50) ಪುತ್ರಿ ಮೇಘಾ ಹತ್ತರವಾಠ (25) ಮೃತರು. ಮೌನಿ ಅಮವಾಸ್ಯೆಯ ದಿನ ಪುಣ್ಯಸ್ನಾನಕ್ಕೆಂದು ಹೋದವರು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.