newsics.com
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿಕೆ ಸುರೇಶ್ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸಿಪಿ ಯೋಗೇಶ್ವರ್ ನೀರಿಗೆ ಬಿದ್ದಿದ್ದಾರೆ. ಕಣ್ವ ಜಲಾಶಯದಲ್ಲಿ ವಾಟರ್ ಬೈಕ್ ರೈಡ್ ವೇಳೆ ಈ ಅವಾಂತರ ಸಂಭವಿಸಿದೆ.
ರಾಮನಗರ ಜಿಲ್ಲೆಯ, ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯದಲ್ಲಿ ವಾಟರ್ ಬೈಕ್ ರೈಡ್ ವೇಳೆ ಈ ಅವಾಂತರ ಸಂಭವಿಸಿದೆ. ಕಣ್ವ ಜಲಾಶಯದಲ್ಲಿ ವಾಟರ್ ಬೈಕ್ ರೈಡಿಂಗ್ ಮಾಡ್ತಿದ್ದ ವೇಳೆ ಆಯತಪ್ಪಿ ಡಿ.ಕೆ. ಸುರೇಶ್ ಹಾಗೂ ಸಿಪಿ ಯೋಗೇಶ್ವರ್ ಇಬ್ಬರೂ ನೀರಿಗೆ ಬಿದ್ದಿದ್ದಾರೆ.
ವಾಟರ್ ಬೈಕ್ ರೈಡ್ ಮಾಡುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಆಗ ಆಯತಪ್ಪಿ ಮುಂದೆ ಕುಳಿತಿದ್ದ ಡಿಕೆ ಸುರೇಶ್ ಹಾಗೂ ಹಿಂದೆ ಕುಳಿತಿದ್ದ ಸಿಪಿ ಯೋಗೇಶ್ವರ್ ನೀರಿನಲ್ಲಿ ಬಿದ್ದಿದ್ದಾರೆ. ಕೂಡಲೇ ಇಬ್ಬರೂ ನಾಯಕರು ಈಜಿ ದಡಸೇರಿದ್ದಾರೆ.