newsics.com
ಕರ್ನಾಟಕದಾದ್ಯಂತ ಮೋಡದ ವಾತಾವರಣ ಹೋಗಿ ಇದೀಗ ಮತ್ತೆ ಚಳಿ ಶುರುವಾಗಿದೆ. ಎಲ್ಲೆಡೆ ಬೆಳಗ್ಗೆ ಮಂಜು ಕವಿದ ವಾತಾವರಣವಿರಲಿದ್ದು, ಸೆಕೆಯೂ ಇರಲಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಅಷ್ಟಷ್ಟಾಗಿ ಹೆಚ್ಚಾಗುವ ಸಾಧ್ಯತೆ ಇದೆ.
ಹೌದು, ರಾಜ್ಯದಲ್ಲಿ ಈ ವರ್ಷ ಚಳಿಗಾಲ ಪೂರ್ಣಗೊಳ್ಳುವ ಮುನ್ನವೇ ಬೇಸಿಗೆ ಕಾಲಿಟ್ಟಂತೆ ಕಾಣುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಚಳಿಯ ಪ್ರಮಾಣದಲ್ಲಿ ತೀವ್ರವಾಗಿ ಕುಸಿತ ಕಂಡಿದ್ದು, ಬೇಸಿಗೆಯ ಸೆಕೆ ಕಾಡಲಾರಂಭಿಸಿದೆ. ಚಳಿಗಾಲ ಮುಗಿಯಲು ಇನ್ನೂ ಒಂದು ತಿಂಗಳು ಸಮಯವಿದ್ದರೂ ಹವಾಮಾನ ವೈಪರೀತ್ಯ ಕಂಡುಬಂದಿದೆ.
ರಾಜ್ಯದ ಉಷ್ಣವಲಯದ ಮಟ್ಟದಲ್ಲಿ ಹಗುರದಿಂದ ಮಧ್ಯಮ ಪೂರ್ವ ಅಥವಾ ಈಶಾನ್ಯ ಹವಾಮಾನ ಇರುತ್ತದೆ. ಹೀಗಾಗಿ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ. ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ದಟ್ಟ ಮಂಜು ಅಥವಾ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಲ್ಲದೇ, ರಾಜ್ಯದ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯೂ ಇದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಾದ್ಯಂತ ಚಳಿ ಮುಂದುವರಿಯಲಿದೆ.