Newsics.com
ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ದರ್ಶನ್ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದಾರೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಳೆದಿದ್ದಾರೆ.
ಪವಿತ್ರಾಗೌಡಗೆ ಜೈಲಿನಲ್ಲೂ ಡಿ ಬ್ಯಾರಕ್ ಕೊಠಡಿ ನೀಡಲಾಗಿತ್ತು. ಡಿ ಬಾಸ್ ಗೆಳತಿ ಪವಿತ್ರಾಗೆ ಡಿ ಬ್ಯಾರಕ್ ಕೊಠಡಿ ನೀಡಿದ್ದು ಉಳಿದ ಆರೋಪಿಗಳನ್ನು ಜೈಲಿನ ಕ್ವಾರೆಂಟೈನ್ ಬ್ಯಾರಕ್ಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆ ಈ ರೀತಿ ಮಾಡಲಾಗಿತ್ತು.
ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಾಗುತ್ತದೆ. ಹತ್ತು ಗಂಟೆಯ ಬಳಿಕ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡ ಸರಿಯಾಗಿ ನಿದ್ದೆ ಮಾಡದೆ ಪರದಾಡಿದ್ದು ರಾತ್ರಿ 11 ಗಂಟೆಯ ಸುಮಾರಿಗೆ ನಿದ್ರೆಗೆ ಜಾರಿದ್ದರು.
ಸರಿಯಾಗಿ ನಿದ್ದೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡುತ್ತಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಈಗ ಜೈಲು ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಪವಿತ್ರ ಗೌಡ ಜೈಲಿನ ಬ್ಯಾರಕ್ ನಲ್ಲಿ ವಾಕಿಂಗ್ ಮಾಡಿದ್ದಾರೆ ಎನ್ನಲಾಗಿದೆ.ಜೈಲಿನ ಸಿಬ್ಬಂದಿ ನೀಡಿದ ಕಾಪಿ ಕೂಡಿದ ಪವಿತ್ರಾ ಗೌಡ ಕಾಪಿ ಕುಡಿದು ಬಳಿಕ ನ್ಯೂಸ್ ಪೇಪರ್ ಓದಿದ್ದಾರೆ. ಮಹಿಳಾ ವಿಭಾಗದ ಡಿ ಬ್ಯಾರಕ್ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ. ಇಂದು ಜೈಲಿನ ಮೆನುವಿನಂತೆ ಕೈದಿಗಳಿಗೆ ಉಪ್ಪಿಟ್ಟು ನೀಡಲಿದ್ದಾರೆ.