newsics.com
ಮಂಗಳೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಪಶ್ಚಿಮ ಭಾಗದಲ್ಲಿರುವ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದ್ದರಿಂದ ದೇವಾಲಯ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಬುಧವಾರ ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ಮುಸುಕು ಧಾರಿಗಳು ಓಮ್ನಿ ಕಾರಿನಲ್ಲಿ ಬಂದು ನೆಲಸಮ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವೇಳೆ ಮನೆಯಲ್ಲಿದ್ದ ನಾಯಿ ಮರಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದು, 32 ಗ್ರಾಂ ಚಿನ್ನ, ದಾಖಲೆ ಪತ್ರ, ಹಣಗಳನ್ನೆಲ್ಲ ಮುಸುಧಾರಿಗಳು ದೋಚಿದ್ದಾರೆ ಎಂದು ದೂರಲಾಗಿದೆ.
ಘಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಪುತ್ತೂರು ನಗರ ಪೋಲಿಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ. ದರೋಡೆ ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕೂಡ ನಡೆದಿತ್ತು.
ಪೊಲೀಸ್ ಠಾಣೆಗೆ ಆಗಮಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು, ಯಾವುದೇ ಸೂಚನೆ ನೀಡದೇ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದವರ ಮೇಲೆ ಕೇಸ್ ಹಾಕುವಂತೆ ಒತ್ತಾಯಿಸಿದರು.
ಕೊನೇ ಕ್ಷಣದಲ್ಲಿ ಪುತ್ತೂರು ನಗರಠಾಣಾ ಪೊಲೀಸರು ಪುತ್ತೂರು ಮಹಾಲಿಂಗೇಶ್ವರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ, ಟ್ರಸ್ಟಿ ವಿನಯ ಸುವರ್ಣ ಮತ್ತು ಇತರರ ಮೇಲೆ ಕೇಸ್ ದಾಖಲಿಸಿದ್ದಾರೆ.
ದೇವಸ್ಥಾನದ ಅಭಿವೃದ್ಧಿಗಾಗಿ ದೇವಸ್ಥಾನದ ಜಮೀನಿನಲ್ಲಿ ಇದ್ದ ಎಂಟು ಮನೆಗಳ ತೆರವಿಗೆ ಸೂಚಿಸಲಾಗಿತ್ತು. ಈ ಪೈಕಿ ಆರು ಮನೆಗಳನ್ನು ಬಿಟ್ಟುಕೊಟ್ಟಿದ್ದರೆ, ಸ್ಥಳೀಯ ನ್ಯಾಯವಾದಿ ಹಾಗೂ ಬಿಜೆಪಿ ಮುಖಂಡರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವೇಳೆ ನ್ಯಾಯವಾದಿ ಮನೆ ಮೇಲೆ ಫೆ.2ರಂದು ಮರ ಬಿದ್ದಿತ್ತು. ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಜತೆಗೆ ಮಂಗಳವಾರ ಮಾತುಕತೆ ನಿಗದಿಯಾಗಿದ್ದರೂ ಅವರು ತೆರವಿಗೆ ಕಾಲಾವಕಾಶ ಕೋರಿದ್ದರು ಎನ್ನಲಾಗಿದೆ.
ಆದರೆ ಮಂಗಳವಾರ ಮಧ್ಯರಾತ್ರಿ ರಾಜೇಶ್ ಬನ್ನೂರು ಸುಪರ್ದಿಯಲ್ಲಿದ್ದ ಮನೆಯನ್ನು ಜೆಸಿಬಿ ಬಳಸಿ ನೆಲಸಮ ಮಾಡಲಾಗಿದೆ. ಆದರೆ ಇದನ್ನು ಮಾಡಿದ್ದು ಯಾರು ಎಂಬುದು ಈವರೆಗೂ ಖಚಿತವಾಗಿಲ್ಲ.
MUDA case ನಿವೇಶನಗಳ ವಹಿವಾಟಿನಲ್ಲಿ ಅಕ್ರಮ ಹಣ ಶಂಕೆ: ಇಡಿಯಿಂದ 812 ಮುಡಾ ಸೈಟ್ ಜಪ್ತಿ