newsics.com
ಬೆಂಗಳೂರು: ಪೀಣ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಆರೆಂಜ್ ಲೈನ್ನ ನಮ್ಮ ಮೆಟ್ರೋ ರೈಲು ನಿಲ್ದಾಣವನ್ನು ಹೊರ ವರ್ತುಲ ರಸ್ತೆ ಗೊರಗುಂಟೆಪಾಳ್ಯ ಸಿಗ್ನಲ್ ಬಳಿಗೆ ಸ್ಥಳಾಂತರಿಸುವ ಬಗ್ಗೆ BMRCL ಚಿಂತನೆ ನಡೆಸಿದೆ.
ನಮ್ಮ ಮೆಟ್ರೋ ಯೋಜನೆಯ 3ನೇ ಹಂತದಲ್ಲಿ ನಿರ್ಮಾಣವಾಗಲಿರುವ ಜೆಪಿ ನಗರ, 4ನೇ ಹಂತದ ಕೆಂಪಾಪುರವರೆಗಿನ 32.15 ಕಿ.ಮೀ ಆರೆಂಜ್ ಲೈನ್ ಅನ್ನು 300 ಮೀ.ಗಳಷ್ಟು ಕಡಿಮೆ ಮಾಡುವ ಉದ್ದೇಶದಿಂದ ಈ ಚಿಂತನೆಗೆ ಮುಂದಾಗಿದೆ. ಹೊಸ ನಿಲ್ದಾಣವು ಪೀಣ್ಯ ಮತ್ತು ಗೊರಗುಂಟೆಪಾಳ್ಯದಲ್ಲಿ ಅಸ್ತಿತ್ವದಲ್ಲಿರುವ ಮೆಟ್ರೋ ನಿಲ್ದಾಣಗಳಿಗೆ ಎರಡು ಪ್ರತ್ಯೇಕ ಪಾದಚಾರಿ ಮೇಲ್ಸೇತುವೆಗಳ ಮೂಲಕ ಸಂಪರ್ಕ ಕಲ್ಪಿಸಲಿದೆ.
ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮೆಟ್ರೋ ನಿರ್ಮಾಣ ಸ್ಥಳಗಳಿಗೆ ಗುರುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಿಎಂಆರ್ಸಿಎಲ್ ಅಧಿಕಾರಿಗಳು ಡಿಸಿಎಂ ಅವರ ಬಳಿ ಈ ಪ್ರಸ್ತಾವನೆಯನ್ನು ಮಂಡಿಸಿದ್ದಾರೆ