ಕಲಬುರಗಿ: ನಗರದ ಸಪ್ತಗಿರಿ ಆರೆಂಜ್ ಹೋಟೆಲ್ನಲ್ಲಿ ಇಂದು(ಶುಕ್ರವಾರ) ಬೆಳಿಗ್ಗೆ ಸಿಲಿಂಡರ್ ಸ್ಪೋಟಗೊಂಡಿದ್ದ ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡ 10 ಜನರಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ರೋಜಾ(ಬಿ) ಬಡಾವಣೆಯ ನಿವಾಸಿ ಮಲ್ಲಿಕಾರ್ಜುನ (40) ಮೃತ ವ್ಯಕ್ತಿ. ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ಕೊಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಿಸಿದೆ ಕೊನೆಯುಸಿರೆಳೆದಿದ್ದಾರೆ. ಸತ್ಯವಾನ್ ಶರ್ಮ, ರಾಕೇಶ್, ಮಹೇಶ್, ವಿಠಲ್, ಗುರುಮೂರ್ತಿ, ಅಪ್ಪರಾಯ್, ಮಲ್ಲಿನಾಥ್ ಸೇರಿದಂತೆ ಹತ್ತು ಜನ ಗಾಯಗೊಂಡಿದ್ದು, ನಾಲ್ವರು ಅಡುಗೆ ಸಿಬ್ಬಂದಿಗಳ ಸ್ಥಿತಿ ಚಿಂತಾಜನಕವಾಗಿತ್ತು.
ಕಲಬುರಗಿ ನಗರದ ಜನಬೀಡ ಪ್ರದೇಶವಾದ ಅಪ್ಪಾ ಕೆರೆ ಬಳಿಯ ಸಪ್ತಗಿರಿ ಆರೆಂಜ್ ಹೋಟೆಲ್ನಲ್ಲಿ ಇಂದು ಬೆಳಗ್ಗೆ 6 ಗಂಟೆಗೆ ಎಂದಿನಂತೆ ಅಡುಗೆ ಸಿಬ್ಬಂದಿ ಬೆಳಗಿನ ಉಪಹಾರ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಒಂದು ಸಿಲಿಂಡರ್ನಲ್ಲಿ ಲೀಕೇಜ್ ಕಂಡು ಬಂದತಕ್ಷಣ ಎಲ್ಲಾ ಸಿಬ್ಬಂದಿಗಳು ಹೊರಗೆ ಓಡಿಬಂದಿದ್ದಾರೆ.
.