newsics.com
ಮೈಸೂರು: ಸಾಮಾಜಿಕ ಮಾಧ್ಯಮ ಪೋಸ್ಟ್ ಹಚ್ಚಿದ ಕಿಚ್ಚಿನಿಂದಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಸೋಮವಾರ ರಾತ್ರಿ ಸಮುದಾಯವೊಂದರ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ.
ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆದಿದೆ. ನಂತರ ಲಾಠಿಚಾರ್ಜ್ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು.
ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಹಾಕಲಾಗಿತ್ತು. ವ್ಯಂಗ್ಯವಾಗಿ ಹಾಕಿದ್ದಷ್ಟೇ ಆಗಿದ್ದರೆ ಯಾವುದೇ ಸಮಸ್ಯೆ ಆಗುತ್ತಿರಲಿಲ್ಲ. ಆದರೆ, ಆ ಪೋಸ್ಟ್ನಲ್ಲಿ ಒಂದು ಧರ್ಮಕ್ಕೆ ಅವಮಾನ ಮಾಡುವ ರೀತಿ ವಾಕ್ಯಗಳನ್ನು ಬರೆಯಲಾಗಿತ್ತು. ಇದು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ.
ಪರಿಸ್ಥಿತಿ ವಿಕೋಪಕ್ಕೆ ಹೋದದ್ದನ್ನು ಗಮನಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದೇ ಹೋದಾಗ ಅಶ್ರುವಾಯು ಸಿಡಿಸಿ ಯುವಕರ ಗುಂಪನ್ನು ಚದುರಿಸಲಾಯಿತು. ಅಶ್ರುವಾಯು ಸಿಡಿಸಿದ ತಕ್ಷಣ ಗುಂಪು ಚೆಲ್ಲಾಪಿಲ್ಲಿಯಾಗಿ ಓಡಿ ಹೋಯಿತು. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.