newsics.com
ಮಂಗಳೂರು: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ನೋಡಿದ್ದಾರೆ. ಇತ್ತೀಚೆಗೆ ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ್ದು, ಇದಕ್ಕೆ ವಿಶಾಲ್ ಒಪ್ಪಿದ್ದಾರೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಅವರು ನಡುಗುತ್ತಾ ಮಾತನಾಡಿದ್ದರು. ಸ್ಟೇಜ್ ನಲ್ಲಿಅವರು ಕೈಗಳನ್ನು ನಡುಗಿಸುತ್ತಾ ತೊದಲು ಮಾತನಾಡಿದ್ದರು. ಇದರಿಂದ ಅವರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂಬುದು ಗೊತ್ತಾಗಿತ್ತು. ಈ ಹಿನ್ನೆಲೆ ನಟ ವಿಶಾಲ್ ಅವರು ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹರಿಪಾದದಲ್ಲಿನ ಜಾರಂದಾಯ ದೇವಾಲಯಕ್ಕೆ ಅವರು ಭೇಟಿ ನೀಡಿದ್ದು, ಆರೋಗ್ಯ ಸಮಸ್ಯೆಯನ್ನು ನಿವಾರಿಸುವಂತೆ ದೈವದ ಮೊರೆ ಹೋಗಿದ್ದಾರೆ.
ಕಣ್ಣೀರು ಹಾಕಬೇಡ, ನಾನಿದ್ದೇನೆ ಎಂದು ಖ್ಯಾತ ನಟ ವಿಶಾಲ್ ಗೆ ತುಳುನಾಡಿನ ದೈವದ ಅಭಯ ನೀಡಿದೆ. ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ ಆರೋಗ್ಯ ಸಮಸ್ಯೆ ನಿವಾರಿಸುವಂತೆ ಬೇಡಿಕೊಂಡಿದ್ದಾರೆ. ಕಣ್ಣೀರು ಹಾಕಬೇಡ, ನಾನಿದ್ದೇನೆ. ನಿನ್ನ ಆರೋಗ್ಯ ಸರಿಯಾಗಲಿದೆ. ಗುಣಮುಖನಾಗಿ ಬಂದು ತುಲಾಭಾರ ಸೇವೆ ಅರ್ಪಿಸು ಎಂದು ದೈವ ಅಭಯ ನೀಡಿದೆ.