newsics.com
ಬೆಂಗಳೂರು: ಬಿಗ್ ಬಾಸ್ ಕನ್ನಡ 11ರ ವಿಜೇತ ಹನುಮಂತು ಅವರಿಗೆ ಸಿನಿಮಾ ಆಫರ್ಗಳ ಜೊತೆಗೆ ರಾಜಕೀಯ ಆಫರ್ಗಳು ಕೂಡ ಬಂದಿವೆ. ಹಾವೇರಿ ರಾಜಕೀಯ ನಾಯಕ ಮಾಜಿ ಸಚಿವರೊಬ್ಬರು ಹನುಮಂತುಗೆ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ.
ಬಿಗ್ ಬಾಸ್ ಸೀಸನ್ 11ಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದ ಹನುಮಂತ, ಟ್ರೋಫಿ ಗೆಲ್ಲುವ ಮೂಲಕ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ.
ಕಳೆದ 4 ದಿನಗಳ ದಿನಗಳ ಹಿಂದೆ ಹಾವೇರಿ ಜಿಲ್ಲೆಯ ರಾಜಕೀಯ ನಾಯಕ ಹಾಗೂ ಮಾಜಿ ಕೃಷಿ ಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರು ಕರೆ ಮಾಡಿ, ಕಂಗ್ರಾಜುಲೇಷನ್ಸ್ ಹನುಮಂತು. ಹಾವೇರಿ ಘನತೆ ಗೌರವವನ್ನು ಎತ್ತಿ ಹಿಡಿದಿದ್ದೀಯ. ನಾನು ನಿಮ್ಮನ್ನು ನೋಡ್ತಿದ್ದೇನೆ ತುಂಬಾ ಚೆನ್ನಾಗಿ ಆಟವಾಡಿದ್ದೀರಿ ಎಂದು ಹೇಳಿದ್ದಾರೆ. ಈ ಆಡಿಯೋವನ್ನು ಸ್ವತಃ ಬಿ.ಸಿ. ಪಾಟೀಲ್ ಅವರೇ ಶೇರ್ ಮಾಡಿದ್ದಾರೆ.
ಈ ಹಿಂದೆ ಗಾಯಕ ಹನುಮಂತ ಅವರಿ ಹಾವೇರಿ ಜಿಲ್ಲೆಯ ಮತದಾರ ಜಾಗೃತಿಯ ಸ್ವೀಪ್ ರಾಯಭಾರಿಯಾಗಿಯೂ ಕೆಲಸ ಮಾಡಿದ್ದರು. ಸದ್ಯ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಹನುಮಂತನನ್ನು ಸೆಳೆಯಲು ಮುಂದಾಗಿವೆ.
ಬಿಗ್ ಬಾಸ್ ಟ್ರೋಫಿ ವಿಜೇತ ಹನುಮಂತು ಅವರು ರಾಜಕೀಯಕ್ಕೆ ಬರುತ್ತಾರಾ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಚರ್ಚೆಯನ್ನು ಮಾಡಲಾಗಿಲ್ಲ. ಗ್ರಾಮೀಣ ಭಾಗದಲ್ಲಿ ರಾಜಕೀಯ ನಾಯಕರು ಹನುಮಂತನನ್ನು ರಾಜಕೀಯಕ್ಕೆ ಕರೆತರುವುದಕ್ಕೆ ಚಿಂತನೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ.