newsics.com
ಸಿದ್ದಾಪುರ: ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲಾಗಿರುವ ಘಟನೆ ತಾಲೂಕಿನ ನಿಲ್ಕುಂದದ ವಾಟೇ ಹೊಳೆ ಫಾಲ್ಸ್ನಲ್ಲಿ ನಡೆದಿದೆ.
ಆರು ಜನ ಸ್ನೇಹಿತರು ಸೇರಿ ಫಾಲ್ಸ್ ನೋಡಲು ಹೋಗಿದ್ದರು ಎನ್ನಲಾಗಿದ್ದು, ಈ ವೇಳೆ ಫಾಲ್ಸ್ನಲ್ಲಿ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ಶಿರಸಿ ಮೂಲದ ಅಕ್ಷಯ ಭಟ್ ಹಾಗೂ ಸುಹಾಸ ಶೆಟ್ಟಿ ನೀರುಪಾಲಾಗಿರುವ ಯುವಕರು ಎನ್ನಲಾಗಿದೆ.
ಸ್ಥಳಕ್ಕೆ ಡಿ.ಎಸ್.ಪಿ. ಕೆ.ಎಲ್.ಗಣೇಶ, ಸಿದ್ದಾಪುರ ಇನಸ್ಪೆಕ್ಟರ್ ಜೆ.ಬಿ.ಸೀತಾರಾಮ ದೌಡಾಯಿಸಿದ್ದು, ಮುಳುಗುತಜ್ಞರು, ಮಾರಿಕಾಂಬಾ ಲೈಫ್ ಗಾರ್ಡ್ ಗೋಪಾಲ ಗೌಡ ತಂಡ ಸಹ ಕಣ್ಮರೆಯಾದವರಿಗಾಗಿ ಶೋಧ ಕಾರ್ಯಚರಣೆ ನಡೆಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.