newsics.com
ಮೈಸೂರು: ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಮದುವೆ ಸಮಾರಂಭ ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಭಾನುವಾರ ಅದ್ಧೂರಿಯಾಗಿ ನೆರವೇರಿತು.
ಚಿತ್ರರಂಗದ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಅಭಿಮಾನಿಗಳು ಆಗಮಿಸಿ ನವದಂಪತಿಗೆ ಶುಭ ಹಾರೈಸಿದರು.
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ನಟ, ಶಾಸಕ ಸಾಧು ಕೋಕಿಲ, ಹಿರಿಯ ನಿರ್ದೇಶಕ ನಾಗಭರಣ, ಹಿರಿಯ ಕಲಾವಿದ ಮಂಡ್ಯ ರಮೇಶ್, ನಟ ಲೂಸ್ ಮಾದ, ನಟಿ ಸೋನು ಗೌಡ ಮತ್ತು ಸಿದ್ಲಿಂಗು ಪಾರ್ಟ್-2 ಚಿತ್ರತಂಡ, ತರುಣ್ ಸೋನಾಲ್, ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ, ಅರಸೀಕೆರೆ ಶಾಸಕ ಶಿವಲಿಂಗೇ ಗೌಡ, ಶಾಸಕಿ ನಯನ ಮೋಟಮ್ಮ , ಸಚಿವ ಸತೀಶ್ ಜಾರಕಿಹೊಳಿ ಮತ್ತಿತರರು ಆಗಮಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಜೋಡಿಗೆ ಶುಭಾಶಯ ಕೋರಿದರು.

ಸಪ್ತಪದಿ ತುಳಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಡಾಲಿ- ಧನ್ಯತಾ ಜೋಡಿ, ಮೈಸೂರಿನಲ್ಲಿ ಬೆಳೆದ ಪ್ರತಿಯೊಬ್ಬರಿಗೂ, ಮೈಸೂರು ಒಂದು ಎಮೋಷನಲ್. ನನ್ನ ತಾಯಿಯ ನಂಬಿಕೆಯನ್ನು ಉಳಿಸಿಕೊಂಡಿದ್ದೇನೆ. ನನಗೆ ಜೀವನ ಕಟ್ಟಿಕೊಟ್ಟ ಮೈಸೂರಿನಲ್ಲೇ ಮದುವೆಯಾಗಿದ್ದಕ್ಕೆ ಬಹಳ ಖುಷಿಯಾಗಿದೆ. ಮೈಸೂರಿನ ಸ್ನೇಹಿತರೆಲ್ಲರೂ ಬಂದು ಶುಭ ಹಾರೈಸಿದಕ್ಕೆ ಡಬಲ್ ಖುಷಿಯಾಗಿದೆ ಎಂದು ಡಾಲಿ ಧನಂಜಯ್ ಹೇಳಿದರು.
ಮದುವೆ ಸಂಭ್ರಮ ಚೆನ್ನಾಗಿ ನಡೆದಿದೆ. ಯಾವುದಾದರೂ ಸಣ್ಣ ಪುಟ್ಟ ತೊಂದರೆಗಳು ಆಗಿದ್ದರೆ ಕ್ಷಮೆ ಇರಲಿ. ವಿದ್ಯಾಪತಿ ದ್ವಾರದಿಂದ ಅಭಿಮಾನಿಗಳು ಬಂದು ಆಶೀರ್ವಾದ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದೆ. ನಮ್ಮ ಮನೆಯವರು ಖುಷಿಯಾಗಿದ್ದಾರೆ. ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲೇ ಮದುವೆಗೆ ಬಂದಿದ್ದಾರೆ. ತುಂಬಾ ಸಮಯ ನಮಗಾಗಿ ಕಾದಿದ್ದಾರೆ. ಅಭಿಮಾನಿಗಳ ಪ್ರೀತಿ ದೊಡ್ಡದು ಎಂದರು ಡಾಲಿ.
ಅಭಿಮಾನಿಗಳಿಗೆ ಸಾಕಷ್ಟು ಗೌರವ ಕೊಡಬೇಕು. ನಾವು ನಿಗದಿಪಡಿಸಿದ ಸ್ಥಳದಲ್ಲಿ ಅವರನ್ನು ನೋಡಿ ಬಹಳ ಖುಷಿಯಾಯಿತು. ಚಿತ್ರರಂಗದ ಗೆಳೆಯರಿಗೂ ಧನ್ಯವಾದಗಳು. ಮದುವೆಯಿಂದ ನನಗೆ ಸಾಕಷ್ಟು ಜವಾಬ್ದಾರಿ ಹೆಚ್ಚಾಗಿದೆ. ಅಭಿಮಾನಿಗಳ ಮೇಲೆ ಗೌರವ ಇನ್ನೂ ಹೆಚ್ಚಿದೆ. ಈ ಜವಾಬ್ದಾರಿ ನಿಭಾಯಿಸಲೇಬೇಕು ಎಂದು ಹೇಳಿದರು.
ಮದುವೆ ಸಮಯದಲ್ಲಿ ಮಾಡಿದ ಎಲ್ಲಾ ಸಂಪ್ರದಾಯಗಳನ್ನು ನಾನು ಮಗುವಿನಂತೆ ಸಂಭ್ರಮಿಸಿದ್ದೇನೆ. ನನ್ನ ತಾಯಿಯ ನಂಬಿಕೆಯನ್ನು ನಾನು ಗೌರವಿಸಬೇಕು. ಮದುವೆ ಬಳಿಕ ಸ್ವಲ್ಪ ವಿರಾಮ ಇದ್ದೇ ಇರುತ್ತದೆ. ನಂತರ ಅವರವರು ಅವರ ವೃತ್ತಿ ಮಾಡ್ತಾರೆ. ನಾನು ಚಿತ್ರರಂಗದಲ್ಲಿ ಭಾಗಿಯಾಗುತ್ತೇನೆ ಎಂದರು.
ಧನ್ಯತಾ ಮಾತನಾಡಿ, ಅಭಿಮಾನಿಗಳ ಪ್ರೀತಿ ಕಂಡು ಮಾತೇ ಹೊರಡುತ್ತಿಲ್ಲ. ಅವರ ಪ್ರೀತಿಯನ್ನು ನೋಡಿ ನಾನು ತುಂಬಾ ಭಾವುಕಳಾದೆ. ನಮ್ಮಲ್ಲಿ ಯಾವುದೇ ಬದಲಾವಣೆ ಇಲ್ಲ. ನಮ್ಮ ಕುಟುಂಬ, ಅವರ ಕುಟುಂಬ ಎರಡೂ ಒಂದೇ. ಇಬ್ಬರೂ ತುಂಬಾ ಅನ್ಯೋನ್ಯತೆಯಿಂದ ಇರುತ್ತೇವೆ. ಎಲ್ಲವೂ ಚೆನ್ನಾಗಿ ಆಗಿದೆ ಎಂದು ಹೇಳಿದರು.
Relstionship ಗಂಡ-ಹೆಂಡತಿ ಸಂಬಂಧದಲ್ಲಿ ಬಿರುಕು ಇದ್ದರೆ ಈ ರೀತಿ ಮಾಡಿ