newsics.com
ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆಯೂ ಆಗಿದ್ದ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ.
ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್ನೋಟ್ ಬರೆದಿಟ್ಟಿದ್ದು, ಡೆತ್ನೋಟ್ನಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ.
10 ವರ್ಷದ ಹಿಂದೆ ಶ್ರುತಿ ಚಾರ್ಟರ್ಡ್ ಅಕೌಂಟೆಂಟ್ ಜತೆ ಮದುವೆಯಾಗಿದ್ದರು. ಅಲ್ಲದೇ ಶ್ರುತಿ ಗ್ರಾಮ ಪಂಚಾಯಿತಿ ಒಂದರ ಅಧ್ಯಕ್ಷೆಯಾಗಿದ್ದು, ಒಂದು ಹೆಣ್ಣು ಒಂದು ಗಂಡು ಮಗು ಸಹ ಇದೆ. ಆದ್ರೆ, ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ರುತಿ, ಪುತ್ರಿ ರೋಹಿಣಿಯನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ. ಗಂಡು ಮಗು ಆಟವಾಡಲು ಮನೆಬಿಟ್ಟು ಆಚೆ ಹೋಗಿದ್ದರಿಂದ ಆ ಮಗು ಬಚಾವ್ ಆಗಿದೆ.
ಬಾಗಲಗುಂಟೆ ಠಾಣೆ ಪೊಲೀಸರು ಮೃತ ಶ್ರುತಿ ಗಂಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
unemployed tekki cry ದಯವಿಟ್ಟು ನನಗೊಂದು ಕೆಲಸ ಕೊಡಿ, ಸಂಬಳ ಬೇಡ: ನಿರುದ್ಯೋಗಿ ಟೆಕ್ಕಿಯ ಅಳಲು