newsics.com
ಚಿಕ್ಕಮಗಳೂರು: ಪ್ರೇಯಸಿಯನ್ನು ಕೊಂದು ಪ್ರಿಯತಮನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದಾಸರಳ್ಳಿ ಬಳಿ ನಡೆದಿದೆ.
ಕಾರಿನಲ್ಲಿ ಯುವತಿ ಹಾಗೂ ಸ್ವಲ್ಪ ದೂರದ ಮರದಲ್ಲಿ ಯುವಕನ ಶವ ಪತ್ತೆಯಾಗಿದೆ.
ರಾಮನಗರ ಮೂಲದ ಯುವಕ ಮಧು, ಯುವತಿ ಪೂರ್ಣಿಮಾ ಸಾವಿಗೀಡಾದವರು.
ಇಬ್ಬರೂ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಬುಧವಾರ
ಇವರಿಬ್ಬರೂ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದು, ಯುವತಿಯನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರು KA 03 AD4628 ನೋಂದಣಿಯ ಬಾಡಿಗೆ ಕಾರಿನಲ್ಲಿ ಈ ಪ್ರೇಮಿಗಳು ಬಂದಿದ್ದಾರೆ.
ಯುವತಿಯ ಕತ್ತು ಹಿಸುಕಿರುವ ಗುರುತು ಕಂಡುಬಂದಿದೆ. ವೇಲ್ನಿಂದ ಪಕ್ಕದ ಮರದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಹಾಗೂ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು
Donald Trump ಭಾರತ ಶ್ರೀಮಂತ ದೇಶ, ನಾವೇಕೆ 21 ಮಿಲಿಯನ್ ಡಾಲರ್ ನೀಡಬೇಕು? ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಶ್ನೆ
MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ ಕೃಷ್ಣ