newsics.com
ಕೋಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
ಗಂಗೂಲಿ ಬೆಂಗಾವಲು ಪಡೆಯ ಎರಡು ವಾಹನಗಳಿಗೆ ಹಾನಿಯಾಗಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಬರ್ಧಮಾನ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ದುರ್ಗಾಪುರ ಎಕ್ಸ್ಪ್ರೆಸ್ವೇಯ ದಂತನ್ಪುರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಅವರ ರೇಂಜ್ ರೋವರ್ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ.
ಸೌರವ್ ಗಂಗೂಲಿ ಅವರ ಬೆಂಗಾವಲು ಪಡೆ ಸಾಮಾನ್ಯ ವೇಗದಲ್ಲಿ ಚಲಿಸುತ್ತಿತ್ತು. ಲಾರಿಯೊಂದು ಬೆಂಗಾವಲು ಪಡೆಯ ಬಳಿ ವೇಗವಾಗಿ ಬಂದಿದ್ದು, ಅಪಘಾತಕ್ಕೆ ಕಾರಣವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದು, ಇದರಿಂದಾಗಿ ಹಿಂದೆ ಬಂದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ.
ಈ ಅಪಘಾತದಲ್ಲಿ, ಗಂಗೂಲಿ ಅವರ ಕಾರಿಗೂ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.
ಅಪಘಾತದ ನಂತರ, ಗಂಗೂಲಿ ಸುಮಾರು 10 ನಿಮಿಷಗಳ ಕಾಲ ರಸ್ತೆಯಲ್ಲಿ ನಿಲ್ಲಬೇಕಾಯಿತು. ನಂತರ ಅವರು ಬುರ್ದ್ವಾನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಮುಂದುವರಿದ ಚಿಕಿತ್ಸೆ…sonia gandhi admitted hospital
Summer health ಬೇಸಿಗೆಯಲ್ಲಿ ಆರೋಗ್ಯವಾಗಿರಲು ಗರ್ಭಿಣಿಯರು ಏನು ಮಾಡಬಹುದು?
ಕೃತಕ ಬಣ್ಣ ಬಳಸಿ ಬಟಾಣಿ ಮಾರಾಟ: ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ…Fried Green Peas