newsics.com
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ರೂಪಾ ಹೂಡಿರುವ ಮಾನಹಾನಿ ಪ್ರಕರಣದ ಸಂಬಂಧ ಜ.13ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಸಂಜ್ಞೇ (ಕಾಗ್ನಿಜೆನ್ಸ್) ಪರಿಗಣಿಸಿರುವುದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ನಡೆಸಿರುವ ಹೈಕೋರ್ಟ್, ರೋಹಿಣಿ ವಿರುದ್ಧ ರೂಪಾ ದಾಖಲಿಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಮುಂದಿನ ವಿಚಾರಣೆವರೆಗೆ ತಡೆ ವಿಧಿಸಿ ಮಾ.12ರವರೆಗೆ ವಿಚಾರಣೆ ಮುಂದೂಡಿದೆ.
2023ರ ಫೆ.19ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದಾರೆ. ಬಳಿಕ ಅದನ್ನು ‘X’ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ಮಾಧ್ಯಮ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಅವರ ಪೋಸ್ಟ್ ಅನ್ನು 1.8 ಲಕ್ಷ ಜನರು ವೀಕ್ಷಿಸಿದ್ದರು. ರೋಹಿಣಿ ಅವರ ಅವಹೇಳನಕಾರಿ ಮಾಧ್ಯಮ ಹೇಳಿಕೆ ಬಳಿಕ ನನ್ನ ವರ್ಗಾವಣೆಯಾಗಿದೆ. 6 ತಿಂಗವರೆಗೆ ಸಂಬಳ ನೀಡದೇ ಹುದ್ದೆಯೂ ಇಲ್ಲದೇ ವರ್ಗಾಯಿಸಿದ್ದರು. ರೋಹಿಣಿ ಮಾಧ್ಯಮ ಹೇಳಿಕೆಯಿಂದ ನನ್ನ ಪತಿ, ಮಕ್ಕಳು, ತಂಗಿ ಮಾನಸಿಕ ಯಾತನೆಯನ್ನು ಅನುಭವಿಸಿದ್ದಾರೆ ಎಂಬ ಕಾರಣಗಳನ್ನು ನೀಡಿ ರೂಪಾ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಮಾನನಷ್ಟ ಮೊಕ್ಕದ್ದಮೆ ಪ್ರಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ.