newsics.com
ಬೆಳಗಾವಿ: ಕನ್ನಡ ಮಾತನಾಡಿದ್ದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೀಗ ಎಂಇಎಸ್ ಮುಖಂಡನೊಬ್ಬ ಕನ್ನಡ ಪರ ಸಂಘಟನೆಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾನೆ.
ಈ ಬಗ್ಗೆ ಮಾತನಾಡಿದ ಎಂಇಎಸ್ ಮುಖಂಡ ಶುಭಂ ಶಳಕೆ, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದಾಗ, ನಿರ್ವಾಹಕ ಉದ್ಧಟತನದಿಂದ ಉತ್ತರಿಸಿದ್ದಾನೆ. ಪರಿಣಾಮವಾಗಿ, ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದಾನೆ.
ಘಟನೆಯನ್ನು ಖಂಡಿಸಿರುವ ಕೆಲ ಕನ್ನಡಪರ ಸಂಘಟನೆಗಳು, ನಿರ್ವಾಹಕ ತನ್ನ ತಪ್ಪು ಮುಚ್ಚಿಹಾಕಲು ಭಾಷಾ ವಿವಾದ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಅಲ್ಲದೇ, ಮರಾಠಿ ಬರಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಆತನ ಸುಳ್ಳು ಹೇಳುತ್ತಿದ್ದಾನೆ. ಆತನನ್ನು ಬೆಂಬಲಿಸಿಕೊಂಡು ಬಂದಿರುವ ಕನ್ನಡಪರ ಸಂಘಟನೆಯವರು ನಾಲಾಯ್ಕಗಳು ಎಂದು ನಾಲಿಗೆ ಹರಿಬಿಟ್ಟಿದ್ದಾನೆ.