newsics.com
ತಿರುವನಂತಪುರಂ: ಕೇರಳದಲ್ಲಿ ಭೀಕರ ಹತ್ಯಾಕಾಂಡವೊಂದು ನಡೆದಿದ್ದು, ಯುವಕನೊಬ್ಬ ಒಂದೇ ಕುಟುಂಬದ 6 ಮಂದಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂನಲ್ಲಿ ಸೋಮವಾರ 23 ವರ್ಷದ ಯುವಕನೊಬ್ಬ ತನ್ನ ತಾಯಿ, ಸಹೋದರ ಮತ್ತು ಗೆಳತಿ ಸೇರಿದಂತೆ ಆರು ಜನರನ್ನು ಕೊಂದಿರುವುದಾಗಿ ಪೊಲೀಸರಿಗೆ ತಿಳಿಸಿದ ಬಳಿಕವೇ ಭಾರೀ ಹತ್ಯಾಕಾಂಡವೊಂದು ಬೆಳಕಿಗೆ ಬಂದಿದೆ.
ಸೋಮವಾರ ಸಂಜೆ ಕೆಲವು ಗಂಟೆಗಳಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಕೊಲೆಗಳು ನಡೆದಿವೆ. ಆರೋಪಿ ಅಫಾನ್ ಪೊಲೀಸ್ ಠಾಣೆಯಲ್ಲಿ ಶರಣಾಗಿ ಘಟನೆಗಳ ಅನುಕ್ರಮವನ್ನು ವಿವರಿಸಿದ ನಂತರ ಇದು ಬೆಳಕಿಗೆ ಬಂದಿದೆ.

ಆರೋಪಿಯ 13 ವರ್ಷದ ಸಹೋದರ ಅಹಸನ್, ಅಜ್ಜಿ ಸಲ್ಮಾ ಬೀವಿ, ತಂದೆಯ ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿಹಾ ಮತ್ತು ಅವನ ಗೆಳತಿ ಫರ್ಶಾನಾ ಅವರ ಸಾವನ್ನು ಪೊಲೀಸರು ದೃಢಪಡಿಸಿದ್ದಾರೆ.
ಅಫಾನ್ ಅವರ ತಾಯಿ ಗಂಭೀರ ಸ್ಥಿತಿಯಲ್ಲಿದ್ದು, ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯು ತಾನು ವಿಷ ಸೇವಿಸಿದ್ದೇನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ತಕ್ಷಣ ಅವನನ್ನು ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹತ್ಯೆಗಳ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಸಾಮೂಹಿಕ ಹತ್ಯೆಯ ಬಗ್ಗೆ ವಿವರವಾದ ತನಿಖೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ
D.K. Shivakumar ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್: ಹೈಕಮಾಂಡ್ಗೆ ದೂರು ಸಾಧ್ಯತೆ
fire cracker factory ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಮೂವರು ಮಹಿಳೆಯರ ಸಜೀವದಹನ
coconut oil price hike ಮತ್ತೊಂದು ಶಾಕ್: 300 ರೂ. ಗಡಿ ದಾಟಿದ ಕೊಬ್ಬರಿ ಎಣ್ಣೆ ದರ