newsics.com
ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದುದೆಹಲಿ ಹೈಕೋರ್ಟ್ ಫೆ.12 ರಂದು ತೀರ್ಪು ಪ್ರಕಟಿಸಿತ್ತು.ಫೆ.21 ರಂದು ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ನ ಮಾಜಿ ಸಂಸದ ಸಜ್ಜನ್ ಕುಮಾರ್ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿತ್ತು. ಇದೀಗ ಮಾಜಿ ಸಂಸದ ಸಚಿನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಏನಿದು ಪ್ರಕರಣ?
1984ರ ನವೆಂಬರ್ 1 ರಂದು ಸಿಖ್ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್ ಬಳಿ ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣ್ದೀಪ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ಮುಖ್ಯ ಆರೋಪಿ ಎಂದು ಬಂಧಿಸಲಾಗಿತ್ತು.
ಈ ದಾಳಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರಕಾಸ್ತ್ರಗಳನ್ನು ಹಿಡಿದಿದ್ದ ಗುಂಪು, ಸಿಖ್ ಸಮುದಾಯದವರಿಗೆ ಸೇರಿದ ಸ್ಥಳಗಳಲ್ಲಿ ಲೂಟಿ ಮಾಡಿ, ಗಲಭೆ ಸೃಷ್ಟಿಸಿ ಅಪಾರ ಹಾನಿಗೆ ಕಾರಣವಾಗಿತ್ತು. ಆ ವೇಳೆ ಮನೆಗಳಿಗೆ ನುಗ್ಗಿದ ಉದ್ರಿಕ್ತರು, ಪತಿ ಮತ್ತು ಮಗನನ್ನು ಹತ್ಯೆ ಮಾಡಿದ್ದರು.
ಆದರೆ ಈ ಪ್ರಕರಣದ ಬಗ್ಗೆ ಜಸ್ವಂತ್ ಪತ್ನಿ ಮನೆಗೆ ನುಗ್ಗಿ ಲೂಟ ಮಾಡಿದಲ್ಲದೇ ಬೆಂಕಿ ಹಚ್ಚಿದ್ದರು ಎಂದು ಸಾಕ್ಷಿ ಹೇಳಿರುವುದು ಪ್ರಾಸಿಕ್ಯೂಷನ್ ಆರೋಪ ಪಟ್ಟಿಯಲ್ಲಿ ದಾಖಲಾಗಿದೆ.