newsics.com
ಕೋಲಾರ: ಸಮಾಧಿಯ ಮೇಲೆ ನಿಂತು ಬಿಯರ್ ಕುಡಿದು, ಬೀಡಿ ಸೇದಿ ಹೊಗೆ ಬಿಡುತ್ತಿರುವ ದೃಶ್ಯ. ತಾಳಕ್ಕೆ ತಕ್ಕಂತೆ ನೃತ್ಯ ಮಾಡುತ್ತಿರುವ ಕಾಳಿಯ ವೇಷಧಾರಿ ಮಂಗಳಮುಖಿ, ಮತ್ತೊಂದೆಡೆ ಕುರಿ, ಮೇಕೆಯನ್ನು ಬಾಯಿಯಲ್ಲಿ ಕಚ್ಚಿ ರಕ್ತ ಕುಡಿಯುತ್ತಿರುವ ಭಯಾನಕ ದೃಶ್ಯ…
ಇದನ್ನೆಲ್ಲ ಕುತೂಹಲದಿಂದ ವೀಕ್ಷಿಸುತ್ತಿರುವ ನೂರಾರು ಭಕ್ತರು. ಶಿವರಾತ್ರಿಯ ಮಾರನೇ ದಿನ ಅಮಾವಾಸ್ಯೆಯ ದಿನ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಮಂಚಹಳ್ಳಿ, ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯ ಹಾಗೂ ಕೋಲಾರ ನಗರದ ಭೈರೇಗೌಡ ನಗರದ ಸ್ಮಶಾನ ಸೇರಿದಂತೆ ವಿವಿಧೆಡೆ ಇಂಥ ಭಯಾನಕ ದೃಶ್ಯಗಳು ಕಂಡುಬಂದವು.
ರಾಜ್ಯದ ಗಡಿ ಜಿಲ್ಲೆ ತಮಿಳು ಸಂಸ್ಕೃತಿಗೆ ಮಾರುಹೋಗಿರುವ ಬಂಗಾರಪೇಟೆ ಮತ್ತು ಕೆಜಿಎಫ್ ನಗರದಲ್ಲಿ ಇಂದಿಗೂ ಬಹುತೇಕ ತಮಿಳು ಸಂಸ್ಕೃತಿ ಆಚರಣೆಯಲ್ಲಿದೆ.
ಮಹಾಶಿವರಾತ್ರಿಯ ನಂತರ ಬರುವ ಅಮಾವಾಸ್ಯೆಯಂದು ಕಾಳಿ ಆರಾಧಕರು ದುಷ್ಟಶಕ್ತಿಗಳ ನಿವಾರಣೆಗೆ, ಕಾಳಿ ದೇವಿಯನ್ನು ಒಲಿಸಿಕೊಳ್ಳುವ ಸಲುವಾಗಿ ಮಾಡುವ ನರಕಾಸುರ ಸಂಹಾರ ಮತ್ತು ಸ್ಮಶಾನ ಉತ್ಸವ ಎಂಬ ವಿಶೇಷ ಆಚರಣೆ ಮಾಡುತ್ತಾರೆ. ಈ ದಿನದಂದು ಕಾಳಿ ಆರಾಧಕ ಕಮಲ್ ಎಂಬ ಪೂಜಾರಿ ಕಾಳಿ ವೇಷಧಾರಿಯಾಗಿ ತಲೆಯ ಮೇಲೆ ಕಿರೀಟ ಇಟ್ಟುಕೊಂಡು, ಕುತ್ತಿಗೆಗೆ ತಲೆಬುರುಡೆಯ ಹಾರ ಹಾಕಿಕೊಂಡು ಕಾಳಿ ದೇವಾಲಯದಿಂದ ನೃತ್ಯ ಮಾಡುತ್ತಾ ಸ್ಮಶಾನಕ್ಕೆ ಬರುತ್ತಾರೆ. ಅಲ್ಲಿ ನಿರ್ಮಾಣ ಮಾಡಿರುವ ನರಕಾಸುರ ಮೂರ್ತಿಯ ಮುಂದೆ ನೃತ್ಯ ಮಾಡುತ್ತಾ, ಆ ಕಾಳಿ ಮಾತೆಯೇ ಆವಾಹನೆಯಾದಂತೆ ಕೊನೆಗೆ ತ್ರಿಶೂಲದಿಂದ ನರಕಾಸುರನ ಹೊಟ್ಟೆ ಬಗೆಯುವ ಮೂಲಕ ಈ ನರಕಾಸುರ ಸಂಹಾರ ಮಾಡುತ್ತಾನೆ.
ಮೇಕೆ ಹಾಗೂ ಕೋಳಿಯನ್ನು ವಿಶಿಷ್ಟ ರೀತಿಯಲ್ಲಿ ಬಲಿಕೊಡುತ್ತಾರೆ. ಕುತ್ತಿಗೆ ಕತ್ತರಿಸಿದ ನಂತರ ಮೇಕೆಯ ಬಿಸಿ ರಕ್ತವನ್ನೇ ಸೇವಿಸುತ್ತಾನೆ. ಅಷ್ಟೇ ಅಲ್ಲ, ಕೋಳಿಯ ಕತ್ತನ್ನು ಬಾಯಿಯಿಂದ ಕಚ್ಚಿ ಎಸೆದು ಕೋಳಿಯ ರಕ್ತ ಹೀರುತ್ತಾನೆ. ಈ ದೃಶ್ಯವಂತೂ ನೋಡುಗರ ಮೈ ಝುಮ್ಮೆನಿಸುತ್ತದೆ.
ಶಿವರಾತ್ರಿಯಂದು ನಾಡಿನಲ್ಲಿ ಶಿವನ ಆಚರಣೆ ಮಾಡಿದರೆ, ಮಂಗಳಮುಖಿಯರು ಸ್ಮಶಾನದಲ್ಲಿ ಅರ್ಧನಾರೀಶ್ವರನಂತೆ ಶಿವನನ್ನು ಪೂಜೆ ಮಾಡುತ್ತಾರೆ. ಇನ್ನು ಬಂಗಾರಪೇಟೆ ತಾಲ್ಲೂಕು ಮಂಚಹಳ್ಳಿ ಗ್ರಾಮದಲ್ಲಂತೂ ತರಕಾರಿಗಳನ್ನು ಇಟ್ಟು ನರಕಾಸುರ ಸಂಹಾರ ಮಾಡುತ್ತಾರೆ.
ಹೆಚ್ಚಾಗಿ ತಮಿಳುನಾಡಿನಲ್ಲಿ ಪ್ರಚಲಿತವಿರುವ ಇಂಥದ್ದೊಂದು ಆಚರಣೆ ನಮ್ಮ ರಾಜ್ಯದ ಗಡಿಯ ಭಾಗವಾದ ಕೆಜಿಎಫ್ನಲ್ಲೂ ಹಲವು ವರ್ಷಗಳಿಂದ ಆಚರಣೆಯಲ್ಲಿದೆ.
ಈ ವಿಶೇಷ ದಿನದಂದುಬನರಕಾಸುರ ಸಂಹಾರವನ್ನು ನೋಡಲು ದೂರದ ಊರುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಬರುತ್ತಾರೆ. ತಮಿಳುನಾಡು, ಆಂಧ್ರಪ್ರದೇಶ, ಬೆಂಗಳೂರಿನಿಂದಲೂ ಜನ ಬರುತ್ತಾರೆ. ಈ ವಿಶೇಷ ದಿನದಂದು ಪೂಜೆಯಲ್ಲಿ ಭಾಗವಹಿಸಿದರೆ ದುಷ್ಟಶಕ್ತಿಗಳು ಸಂಹಾರವಾಗುತ್ತವೆ ಎನ್ನುವುದು ನಂಬಿಕೆ.
ಈ ತಪ್ಪು ಮಾಡಿದರೆ ಯಾವ ಹೆಂಡತಿಯೂ ತನ್ನ ಗಂಡನನ್ನು ಕ್ಷಮಿಸುವುದಿಲ್ಲ..!..relationship
ಪ್ರೀತಿಸಿ ಮದುವೆಯಾಗಿದ್ದ ಮಗಳ ಗಂಡನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ..karwar
ಐದು ವರ್ಷದ ಮಗು ಮೇಲೆ ಅಪ್ರಾಪ್ತನಿಂದ ಅತ್ಯಾಚಾರ, ಮಗು ಸ್ಥಿತಿ ಗಂಭೀರ, ಗುಪ್ತಾಂಗಕ್ಕೆ 28 ಹೊಲಿಗೆ