newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟೀಕಿಸಿದ್ದ ಉದ್ಯಮಿ ಮೋಹನ್ ದಾಸ್ ಪೈ ಶನಿವಾರ ಡಿಕೆಶಿ ಅವರೊಂದಿಗೆ ಮಾತುಕತೆ ನಡೆಸಿದ್ದಲ್ಲದೆ ಡಿಕೆ ಪರ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಇತ್ತೀಚೆಗೆ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದ ಉದ್ಯಮಿ ಮೋಹನ್ ದಾಸ್ ಪೈ, ಇದೀಗ ದಿಢೀರ್ ಉಲ್ಟಾ ಹೊಡೆದಿದ್ದು, ಡಿಕೆ ಶಿವಕುಮಾರ್ ಪರ ಅಚ್ಚರಿಯ ಮಾತುಗಳನ್ನಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶನಿವಾರ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸರ್ವಿಸಸ್ ಸಂಸ್ಥೆ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಮಾಜಿ CFO ಟಿ ವಿ ಮೋಹನ್ ದಾಸ್ ಪೈ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮೋಹನ್ ದಾಸ್ ಪೈ, ಡಿಕೆ ಶಿವಕುಮಾರ್ ಉತ್ತಮ ಸಚಿವರು, ಬೆಂಗಳೂರಿನ ಫುಟ್ಪಾತ್, ರಸ್ತೆ, ಮೆಟ್ರೋ ಅಭಿವೃದ್ಧಿ ಸೇರಿದಂತೆ ಅವರೊಂದಿಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಇನ್ನೂ ಆರು ತಿಂಗಳಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಅವರು ಬೆಂಗಳೂರಿನ ಹಿರೋ ಆಗಬೇಕು ಎಂದರು.
ಭಾರತದಲ್ಲಿ ಯಾವುದೇ ಸಿಟಿಯಲ್ಲಿ ಅಭಿವೃದ್ಧಿ ಬಗ್ಗೆ ಉದ್ಯಮಿಗಳ ಸಲಹೆ ಕೇಳಿಲ್ಲ. ಇಲ್ಲಿ ನಾವು ಹೇಳಿದರೆ, ಕರೆದು ಅಭಿಪ್ರಾಯ ಪಡೆಯುತ್ತಾರೆ. ಇಷ್ಟು ಸಾಮರಸ್ಯ ಬೇರೆ ಯಾವ ನಗರದಲ್ಲೂ ಇಲ್ಲ. ಕನ್ನಡಿಗರಿಗೆ ಒಳ್ಳೆಯ ಕೆಲಸ ಸಿಗಬೇಕು. ಬೆಂಗಳೂರು ಅಭಿವೃದ್ಧಿ ಆಗಬೇಕು ಎಂದರು.
Hotel Facts: ಲಾಡ್ಜ್ಗಳಲ್ಲಿ ಹೋಗಿ ಹಾಲ್ಟ್ ಆಗ್ತೀರಾ? ಹಾಗಿದ್ರೆ ಈ ಕೆಲಸ ಮಾಡಿ