Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್
ಕರ್ನಾಟಕಪ್ರಮುಖ

Good News ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

Share
1 Min Read
SHARE

newsics.com

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ರವಾನೆಯಾಗತೊಡಗಿದೆ. 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್ ಮಾಡಿಸಿದ್ದ 2.30 ಲಕ್ಷ ಹೆಣ್ಣು ಮಕ್ಕಳ ಬಾಂಡ್ 18 ವರ್ಷ ಪೂರ್ಣಗೊಳಿಸಿದೆ.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಫಲಾನುಭವಿಗಳಿಗೆ ಹಣವನ್ನು ಡಿಬಿಟಿ ಮೂಲಕ ಕಳುಹಿಸುತ್ತಿದ್ದು, ಈಗಾಗಲೇ ಶೇಕಡ 10 ರಷ್ಟು ಮಂದಿಗೆ ಹಣ ರವಾನೆ ಮಾಡಲಾಗಿದೆ.

ಹಂತಹಂತವಾಗಿ ಉಳಿದವರಿಗೂ ಹಣ ರವಾನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಉತ್ತೇಜಿಸುವ ನಿಟ್ಟಿನಲ್ಲಿ 2006 -07ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದರು.

2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಮಾಡಿಸಿದ್ದ ಹೆಣ್ಣು ಮಗುವಿನ ಬಾಂಡ್ ಈಗ 18 ವರ್ಷ ತುಂಬಿದ್ದು,, ಮೆಚ್ಯೂರಿಟಿ ಅವಧಿ ಪೂರ್ಣವಾದ ಫಲಾನುಭವಿಗಳಿಗೆ ಹಣ ನೀಡಲಾಗುತ್ತದೆ. ನೋಂದಣಿ ಮಾಡಿಸಿಕೊಂಡಿದ್ದ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್‌ಐಸಿಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ. ಈಗಾಗಲೇ ಇಲಾಖೆಯಿಂದ ಎಲ್ಲಾ ಫಲಾನುಭವಿಗಳಿಂದ ಅಗತ್ಯ ದಾಖಲೆಗಳನ್ನು ಪಡೆದು ಹಣ ರವಾನಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಭೇಟಿ ಮಾಡಬಹುದು.

ಭಾಗ್ಯಲಕ್ಷ್ಮಿ ಯೋಜನೆಯನ್ನು ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆಯೊಂದಿಗೆ ವಿಲೀನ ಮಾಡಲಾಗಿದೆ. ಬಿಪಿಎಲ್ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು ಜಾರಿಗೆ ತರಲಾಗಿದ್ದ ಭಾಗ್ಯಲಕ್ಷ್ಮಿ ಯೋಜನೆಯನ್ನು 2020- 21ನೇ ಸಾಲಿನಿಂದ ಆಡಳಿತಾತ್ಮಕ ಕಾರಣಗಳಿಂದ ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯ ಮೂಲಕ ಅನುಷ್ಠಾನಗೊಳಿಸಲಾಗಿದೆ. ಇದನ್ನು ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆ ಎಂದು ಮರುನಾಮಕರಣ ಮಾಡಲಾಗಿದೆ.

TAGGED:Good news for Bhagyalakshmi scheme beneficiaries
Share This Article
Facebook Twitter Copy Link Print
Previous Article ಮೆಟ್ರೋ ಬೆನ್ನಲ್ಲೇ ಶೀಘ್ರವೇ ಆಟೋ‌ ದರ ಏರಿಕೆ
Next Article Ranya Rao ನಟಿ ರನ್ಯಾ ರಾವ್ ಮನೆ ಮೇಲೆ ‘DRI’ ಅಧಿಕಾರಿಗಳ ದಾಳಿ, ಅಪಾರ ಪ್ರಮಾಣದ ಚಿನ್ನಾಭರಣ, ನಗದು ವಶಕ್ಕೆ

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?