newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ, ವೈದ್ಯಕೀಯ ಕ್ಷೇತ್ರಕ್ಕೆ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು.. ಕರ್ನಾಟಕ ಬಜೆಟ್ ನ ಹೈಲೆಟ್ಸ್ ಹೀಗಿದೆ.
ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದ ಯೋಜನೆ ಜಾರಿ
• ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಎಂದು ಮರುನಾಮಕರಣ
• 26 ಸರ್ಕಾರಿ ಮಹಿಳಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ₹301 ಕೋಟಿ ಅನುದಾನ. ಹೊಸದಾಗಿ ಪ್ರಾರಂಭಿಸಿದ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ₹10 ಕೋಟಿ ನೆರವು
• 2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು.
• ಸಿಎಂ ಸಿದ್ದರಾಮಯ್ಯ, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ ಮಕ್ಕಳಿಗೂ ಪ್ರೋತ್ಸಾಹ ಧನ ನೀಡುವುದಗೈ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು ಎಂದರು.ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.
• Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು ಎಂದರು.
• ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್ರ್ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.
ʻ• ಗೃಹ ಆರೋಗ್ಯʼ ಯೋಜನೆಯಡಿ 2024-25 ನೇ ಸಾಲಿನಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು.ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವುದರ ಮೂಲಕ ʻಆರೋಗ್ಯ ಕವಚʼ ಸೇವೆಯನ್ನು ಬಲಪಡಿಸಲಾಗುವುದು.
ಸಾಂಕ್ರಾಮಿಕ ರೋಗಗಳಾದ ಚಿಕೂನ್ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಕಾಡಿನ ಖಾಯಿಲೆಗಳ (KFD) ಪರಿಣಾಮಕಾರಿ ನಿಯಂತ್ರಣಕ್ಕಾಗಿ 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು.ಶ್ರವಣ ಸಂಜೀವಿನಿʼ ಯೋಜನೆಯಡಿ ಮಕ್ಕಳಲ್ಲಿ ಕಂಡುಬರುವ ಶ್ರವಣದೋಷವನ್ನು ಆರಂಭದಲ್ಲಿಯೇ ಗುರುತಿಸಿ ಕಾಕ್ಲಿಯರ್ ಇಂಪ್ಲಾಂಟ್ (Cochlear Implant) ಶಸ್ತ್ರ ಚಿಕಿತ್ಸೆ ಹಾಗೂ ಇಂಪ್ಲಾಂಟ್ಗಳ ಬಿಡಿಭಾಗಗಳ ನಿರ್ವಹಣೆ, ದುರಸ್ತಿ ಮತ್ತು ಬದಲಾವಣೆ ಮಾಡಲು 12 ಕೋಟಿ ರೂ. ಒದಗಿಸಲಾಗುವುದು.
• ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1000 ರೂ, ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1000 ರೂ ಹೆಚ್ಚಳ ಹಾಗೂ ಸಹಾಯಕಿಯರ ಗೌರವಧನ 700 ರೂಗೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ.
* ಕರ್ನಾಟಕದಲ್ಲಿ ಹೊಸದಾಗಿ 500 ಪಬ್ಲಿಕ್ ಶಾಲೆಗಳು ಆರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 50 ಪ್ರೌಢ ಶಾಲೆಗಳು ಉನ್ನತರೀಕರಣ ಮಾಡುವುದಾಗಿ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನೂ ಬೆಂಗಳೂರು ಟನಲ್ ರಸ್ತೆಗೆ 40 ಸಾವಿರ ಕೋಟಿ ರೂ. ಯೋಜನೆ ಹಂಚಿಕೆ ಮಾಡಿದ್ದಾರೆ.
* ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
* ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.ವಾರದಲ್ಲಿ 2 ದಿನ ಬಾಳೆಹಣ್ಣು ವಿತರಣೆ ಮಾಡಲಾಗುತ್ತದೆ. ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
* ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾಸಿಕ ಗೌರವಧನ 2 ಸಾವಿರ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
* ಬೆಂಗಳೂರಿಗೆ ಬಂಪರ್ ಗಿಫ್ಟ್ ಸಿಕ್ಕಿದ್ದು, ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
* ಎಪಿಎಂಸಿಗಳಲ್ಲಿ ನೋಂದಾಯಿತ ಕಾರ್ಮಿಕರಿಗೆ ವಿಮಾ ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.
* ಮೇಕೆದಾಟು ಯೋಜನೆಯ ಪೂರ್ವ ಯೋಜನೆ ಅಂತಿಮಗೊಂಡಿದ್ದು, ಕೇಂದ್ರದ ಅನುಮೋದನೆಗಾಗಿ ಕಾಯಲಾಗುತ್ತಿದೆ: ಸಿಎಂ
* ಎತ್ತಿನಹೊಳೆ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ತುಂಬಿಸುವ ಯೋಜನೆಯನ್ನು 553 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
* ಹೊಸ ಪಬ್ಲಿಕ್ ಶಾಲೆಗಳನ್ನು ತೆರೆಯುವ ಮೂಲಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಜಾಲವನ್ನು ವಿಸ್ತರಿಸಲಾಗುವುದು ಎಂದು ಸಿಎಂ ಘೋಷಿಸಿದರು.
* ಪುತ್ತೂರಿನ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು ಮತ್ತು ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು.
* ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಅಡುಗೆ ಸಲಕರಣೆಗಳನ್ನು ಖರೀದಿಸಲು ಒಟ್ಟು 46 ಕೋಟಿ ರೂ.
* ಫಿಲ್ಮ್ ಸಿಟಿ ಸ್ಥಾಪನೆಗೆ 500 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
* ವಿಶ್ವಬ್ಯಾಂಕ್ ನೆರವಿನ ಬಹುಮಾನ ಯೋಜನೆಯಡಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ ಸಮೀಕ್ಷೆ ನಡೆಸಲಾಗುವುದು
* ತೊಗರಿ (ಪಾರಿವಾಳ ಬಟಾಣಿ) ಕೃಷಿಯಲ್ಲಿ ಸರ್ಕಾರ ಹೊಸ ತಂತ್ರಜ್ಞಾನವನ್ನು ಜಾರಿಗೆ ತಂದಿದೆ ಮತ್ತು 5,000 ಹೊಸ ಸಣ್ಣ ಆಹಾರ ಸಂಸ್ಕರಣಾ ಘಟಕಗಳನ್ನು ಪ್ರಾರಂಭಿಸಿದೆ. ಇದಲ್ಲದೆ, ಜೊಯಿಡಾ ತಾಲ್ಲೂಕನ್ನು ರಾಜ್ಯದ ಮೊದಲ ಸಾವಯವ ತಾಲ್ಲೂಕು ಎಂದು ಘೋಷಿಸಲಾಗಿದೆ
* ಪ್ರವರ್ಗ 2ಎ ಮತ್ತು 2ಬಿ ಸೇರಿದಂತೆ ರಾಜ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಗುತ್ತಿಗೆದಾರರಿಗೆ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
* ಈ ಹಣಕಾಸು ವರ್ಷದಲ್ಲಿ ಐದು ಖಾತರಿ ಯೋಜನೆಗಳಿಗೆ 51,034 ಕೋಟಿ ರೂ.
* 2025-26ನೇ ಸಾಲಿಗೆ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50,000 ರೈತರಿಗೆ ಬೆಂಬಲ ನೀಡಲು 428 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.
* ಈ ಹಿಂದೆ ರೈತರ ಕಲ್ಯಾಣ ಯೋಜನೆಗೆ 44,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿತ್ತು, ಈ ಬಾರಿ ಹಂಚಿಕೆಯನ್ನು 51,331 ಕೋಟಿ ರೂ.ಗೆ ಹೆಚ್ಚಿಸಲಾಗಿದ
* 20 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ನೀತಿಗಳನ್ನು ಪರಿಚಯಿಸಿದೆ.
* ಕರ್ನಾಟಕದ ಆರ್ಥಿಕ ಬೆಳವಣಿಗೆ ರಾಷ್ಟ್ರೀಯ ಸರಾಸರಿಯನ್ನು ಮೀರಿದ್ದು, ದೇಶದ ಜಿಡಿಪಿಗೆ ಕರ್ನಾಟಕ ಶೇ.8.4ರಷ್ಟು ಕೊಡುಗೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.