Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡು ವರ್ಷದ ಸಂಭ್ರಮಾಚರಣೆಗೆ ಡಿಕೆಶಿ ಆಲೋಚನೆ, 15 ಸಚಿವರಿಗೆ ಕೊಕ್ ಕೊಡಲು ಸಿದ್ದು ಚಿಂತನೆ, ಜೋರಾಯ್ತು ಸಿಎಂ-ಡಿಸಿಎಂ ರಾಜಕೀಯ ಮೇಲಾಟ
ಕರ್ನಾಟಕಪ್ರಮುಖ

ಎರಡು ವರ್ಷದ ಸಂಭ್ರಮಾಚರಣೆಗೆ ಡಿಕೆಶಿ ಆಲೋಚನೆ, 15 ಸಚಿವರಿಗೆ ಕೊಕ್ ಕೊಡಲು ಸಿದ್ದು ಚಿಂತನೆ, ಜೋರಾಯ್ತು ಸಿಎಂ-ಡಿಸಿಎಂ ರಾಜಕೀಯ ಮೇಲಾಟ

Share
2 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 23, 2025ಕ್ಕೆ ಎರಡು ವರ್ಷ ಪೂರೈಸಲಿದೆ.

ನವೆಂಬರ್‌ನಲ್ಲಿ ಸಿಎಂ ಹುದ್ದೆಗೆ ಹಕ್ಕು ಮಂಡಿಸಲು ಉತ್ಸುಕರಾಗಿರುವ ಡಿ.ಕೆ. ಶಿವಕುಮಾರ್ ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಉತ್ಸುಕರಾಗಿದ್ದಾರೆ.

ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನರಾಚನೆ ಮಾಡಲು ತಮ್ಮದೇ ಆದ ಯೋಜನೆಯಲ್ಲಿ ಮುಳುಗಿದ್ದಾರೆ. ಇದು ಅವರು ಸಿಎಂ ಆಗಿ ಮುಂದುವರಿಯಲು ಅನುವು ಮಾಡಿಕೊಡುತ್ತದೆ ಎಂದು ಮೂಲಗಳು ತಿಳಿಸಿವೆ.

ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಸಿಎಂ ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಸಂಪುಟ ಪುನರ್ರಚನೆ ಆಯ್ಕೆ ಮಾಡಬಹುದು. ಅಕ್ಟೋಬರ್ 2025ಕ್ಕೆ ಅವರು ಸಿಎಂ ಆಗಿ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುವ ಮೊದಲು ಏನು ಬೇಕಾದರೂ ಆಗಬಹುದು ಎಂದು ಕಾಂಗ್ರೆಸ್‌ನ ಹಿರಿಯ ಶಾಸಕರೊಬ್ಬರು ಹೇಳಿದ್ದಾರೆ.

ಸಂಪುಟ ಪುನರಾಚನೆಗೆ ಹೈಕಮಾಂಡ್ ಅನುಮೋದಿಸಿದರೆ, ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನ ಭದ್ರಪಡಿಸಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. ಅವರು ಈಗಾಗಲೇ ಪಕ್ಷದ ಹೈಕಮಾಂಡ್ ಮತ್ತು ಶಿವಕುಮಾರ್‌ಗೆ ಪರೋಕ್ಷವಾಗಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.
ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಡಿಸಿಎಂ ಆಗಿ ಮುಂದುವರಿಯಲು ಅಭ್ಯಂತರವಿಲ್ಲ, ಅದರಲ್ಲಿ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಸೇರಿದಂತೆ ಉತ್ತಮ ಖಾತೆ ಅವರ ಬಳಿಯಿವೆ. ತಮ್ಮ ಸಚಿವ ಸಂಪುಟದಿಂದ 15 ಸಚಿವರನ್ನು ಕೈಬಿಡಲು ಅವರು ಸಿದ್ಧರಿದ್ದಾರೆ. ಅವರಲ್ಲಿ ಕೆಲವರು ತಮ್ಮ ಬೆಂಬಲಿಗ ಸಚಿವರು ಇದ್ದಾರೆ ಎಂದು ಹೇಳಲಾಗುತ್ತಿದೆ.
ಕೆಲವು ಶಾಸಕರಿಗೆ ಸಚಿವರ ವಿರುದ್ಧ ಅಸಮಾಧಾನವಿದೆ. ಇದನ್ನೇ ನೆಪವಾಗಿಟ್ಟುಕೊಂಡು ಸಚಿವರನ್ನು ಸಂಪುಟದಿಂದ ಕೈಬಿಡಲು ಸಿಎಂ ಮುಂದಾಗಿದ್ದಾರೆ. ಇದು ಸೋಮವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಸ್ಪಷ್ಟವಾಗಿತ್ತು.
ಸಚಿವರು ತಮ್ಮ ಪ್ರಸ್ತಾವನೆಗಳಿಗೆ ಸ್ಪಂದಿಸದಿರುವ ವಿಷಯವನ್ನು ಶಾಸಕರು ಬಹಿರಂಗವಾಗಿ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಅವರು ಸಚಿವರ ಬಗ್ಗೆ ಚಿಂತಿಸುತ್ತಿಲ್ಲ, ಬದಲಿಗೆ ಸಿಎಂ ಆಗಿ ಮುಂದುವರಿಯಲು ಶಾಸಕರ ಬೆಂಬಲ ಹೆಚ್ಚು ಮುಖ್ಯ ಎಂದು ಅವರು ಚಿಂತಿತರಾಗಿದ್ದಾರೆ ಎಂದು ಎಂಎಲ್ ಸಿಯೊಬ್ಬರು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ನಡುವೆ ಗಲಾಟೆ ನಡೆದಿದೆ. ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಕೈ ಕೈ‌ ಮಿಲಾಯಿಸುವ ಹಂತವನ್ನೂ ತಲುಪಿತ್ತು.

set fire to the temple ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

TAGGED:CM-DCM political rivalry intensifiesDK plans to celebrate two yearsSiddu plans to give coke to 15 ministers
Share This Article
Facebook Twitter Copy Link Print
Previous Article Today is a lucky day ಈ ಐದು ರಾಶಿಗಳಿಗೆ ಇಂದು ಅದೃಷ್ಟದ ದಿನ
Next Article Earthquake ಮಡಿಕೇರಿಯ ಕೆಲವೆಡೆ ಭೂಕಂಪನ ಅನುಭವ, ಜನರಿಗೆ ಗಾಬರಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?