newsics.com
ಹೈದರಾಬಾದ್: ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ವ್ಯಕ್ತಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.
ಹೌದು, ಚಿಟ್ ಹೆಸರಿನಲ್ಲಿ ಸಾವಿರಾರು ಜನರನ್ನು ವಂಚಿಸಿ 100 ಕೋಟಿ ರೂ.ಗಳೊಂದಿಗೆ ಪರಾರಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಪುಲ್ಲಯ್ಯ ಎಂಬ ವ್ಯಕ್ತಿಯನ್ನು ಹೈದರಾಬಾದ್ ಸಿಸಿಎಸ್ ಪೊಲೀಸರು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ.
ಆರೋಪಿ ವಶಕ್ಕೆ ಪಡೆದು ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ಬಂಧಿಸಿ ಹೈದರಾಬಾದ್ಗೆ ಶಿಫ್ಟ್ ಮಾಡಲಾಗಿದೆ. ಆಂಧ್ರಪ್ರದೇಶದ ಅನಂತಪುರಂ ಮೂಲದ ಪುಲ್ಲಯ್ಯ ಹಲವು ವರ್ಷಗಳ ಹಿಂದೆ ಹೈದರಾಬಾದ್ಗೆ ಬಂದು ಬಿಕೆಗುಡ ರವೀಂದ್ರನಗರದಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು.
ಇವರು ಹಲವು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದು ನೂರಾರು ಜನರಿಗೆ ವಂಚಿಸಿದ್ದಾರೆ ಎಂದು ಹಣ ಕಳೆದುಕೊಂಡವರು ಆರೋಪಿಸಿದ್ದರು. ಅಷ್ಟೇ ಅಲ್ಲ ಅವರು ಕಳೆದ ತಿಂಗಳು 100 ಕೋಟಿ ರೂ.ಗಳೊಂದಿಗೆ ಪರಾರಿಯಾಗಿದ್ದರು.
ಚೀಟಿಯಲ್ಲಿ ಹಾಕಿದ ಹಣ ಮರಳಿ ಬರದಿದ್ದರಿಂದ ನೊಂದ ಸಂತ್ರಸ್ಥರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ತೆಲಂಗಾಣ ಪೊಲೀಸರು, ಆರೋಪಿ
ಯನ್ನು ಬಂಧಿಸಿದ್ದಾರೆ.