newsics.com
ಬೆಂಗಳೂರು: 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯ ಇಂದು ತೀರ್ಪು ಕಾಯ್ದಿರಿಸಿದೆ.
ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಆದೇಶ ಇಂದು ಹೊರಬೀಳಲಿದೆ. 12 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ಬಂಧನಕ್ಕೆ ಒಳಗಾಗಿದ್ದ ರನ್ಯಾ ರಾವ್ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಶಾಕ್ ನೀಡಿತ್ತು. ಮತ್ತೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಅಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ವೇಳೆ ಚಿನ್ನ ಕಳ್ಳ ಸಾಗಾಣೆ ಮಾಡೋದಕ್ಕೆ ಹವಾಲ ವಹಿವಾಟು ನಡೆಸಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಡಿಆರ್ಐ ಮಾಡಿತ್ತು. ಸುದೀರ್ಘ ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ಆದೇಶ ಹೊರಬೀಳಲಿದೆ.
Good News ಇನ್ಮುಂದೆ ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ: ಅಮಿತ್ ಶಾ