newsics.com
ಕರಾವಳಿಯ ಉಡುಪಿ ಮತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾ.31ರವರೆಗೆ ಅಲ್ಲಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಗಾಳಿ, ಸಿಡಿಲು-ಗುಡುಗು ಸಹಿತ ಸುರಿದ ಮಳೆಯಿಂದ ಇನ್ನಷ್ಟು ಹಾನಿಯ ವಿವರಗಳು ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಮಿಗೆ ಬಂದಿವೆ.
ಇದರಲ್ಲಿ ಕಾರ್ಕಳ ಮುಡಾರಿನ ಕೋಳಿ ಫಾರ್ಮ್ ಸಂಪೂರ್ಣ ಹಾನಿ, ಕಾರ್ಕಳ ಮತ್ತು ಬೈಂದೂರು ತಾಲೂಕುಗಳ 24 ಮನೆಗಳಿಗೆ ಭಾಗಶ:ದಿಂದ ಸಂಪೂರ್ಣ ಹಾನಿ ಸೇರಿದೆ.
ಅಲ್ಲದೇ ಕಾರ್ಕಳ ತಾಲೂಕಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಹಾನಿಯಾದ 19 ಪ್ರಕರಣಗಳು, ಕುಂದಾಪುರ ತಾಲೂಕಿನಲ್ಲಿ ನಾಲ್ಕು ಪ್ರಕರಣ, ಬೈಂದೂರು ತಾಲೂಕಿನಲ್ಲಿ ಐದು ಪ್ರಕರಣಗಳು ವರದಿಯಾಗಿವೆ. ಇನ್ನು ಕಾರ್ಕಳ, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮಿಯ್ಯಾರು, ಕೆರಾಡಿ ಹಾಗೂ ಜಡ್ಕಲ್ನಲ್ಲಿ ಗಾಳಿ-ಮಳೆಯಿಂದ ಅಂಗಡಿ ಹಾಗೂ ದನದ ಕೊಟ್ಟಿಗೆಗೆ ಹಾನಿಯಾದ ವರದಿ ಬಂದಿದ್ದು, 75,000ರೂ.ಗಳಿಗೂ ಅದಿಕ ನಷ್ಟದ ಅಂದಾಜು ಮಾಡಲಾಗಿದೆ.