newsics.com
ಬೆಂಗಳೂರು: ಬೆಂಗಳೂರಿನ ಮೊದಲ ಪೊಲೀಸ್ ಕಮಿಷನರ್ ಆಗಿದ್ದ ಬಿಎನ್ ಗರುಡಾಚಾರ್ ಅವರು ಇಂದು ನಿಧನರಾಗಿದ್ದಾರೆ.
ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ಬಿಎನ್ ಗರುಡಾಚಾರ್ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಟಾಧಿಕಾರಿಯಾಗಿ, ಬೆಂಗಳೂರು ಜಿಲ್ಲೆಯ ಎಸ್ ಪಿ ಹಾಗೂ ಬೆಂಗಳೂರು ನಗರದ ಡಿಸಿಪಿಯಾಗಿ , ಪೊಲೀಸ್ ಡಿಜಿ/ಐಜಿಪಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.
ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ನಗರದ ಡಿ.ಸಿ.ಪಿಯಾಗಿ (8 ವರ್ಷಗಳು) ಮತ್ತು ಪೊಲೀಸ್ ಕಮಿಷನರ್ ಆಗಿ (4 ವರ್ಷ, 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ, 8 ತಿಂಗಳು) ಕೆಲಸ ಮಾಡಿದ್ದರು.
ಐಪಿಎಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಸದಸ್ಯರಾಗಿಯೂ ಕೆಲಸ ಮಾಡಿದ್ದರು.
ಮೃತರ ಅಂತ್ಯಸಂಸ್ಕಾರ ನಾಳೆ ವಿಲ್ಸನ್ ಗಾರ್ಡ್ ನ ವಿದ್ಯುತ್ ಚಿತಾಗಾರದಲ್ಲಿ ನಾಳೆ ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ.
MUKESH AMBANI: ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್!