newsics.com
ಬೆಂಗಳೂರು : ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ರನ್ಯಾ ರಾವ್ ಅವರಿಂದ ತರುಣ್ ಚಿನ್ನ ತರಿಸಿಕೊಳ್ಳುತ್ತಿದ್ದರು, ಈತನೇ ಈ ಪ್ರಕರಣದ ಕಿಂಗ್ ಪಿನ್ ಎಂಬ ಆರೋಪ ಕೇಳಿ ಬರುತ್ತಿತ್ತು. ಈ ಹಿನ್ನಲೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಬಳಿಕ ತರುಣ್ ರಾಜ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನಲೆ ನಟ ತರುಣ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಳಿಯುವ ಸ್ಥಿತಿ ಬಂದಿತ್ತು.
ಇದೀಗ ಮತ್ತೆ ಸಿಸಿಹೆಚ್ 64 ರಲ್ಲಿ ತರುಣ್ ರಾಜ್ ಜಾಮೀನು ಅರ್ಜಿ ಹಾಕಿದ್ದು, ಎಂದು ನಟನಿಗೆ ಜೈಲಾ, ಬೇಲಾ ಎಂದು ತಿಳಿದು ಬರಲಿದೆ.
Earthquake: ಭೂಕಂಪಕ್ಕೆ ನಲುಗಿದ ಮ್ಯಾನ್ಮಾರ್; ಸಾವಿನ ಸಂಖ್ಯೆ 700 ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ!