Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲು ಪ್ರಯಾಣ ದರ ಇಳಿಕೆ ಸಾಧ್ಯತೆ: ಸಚಿವ ಸೋಮಣ್ಣ ಸುಳಿವು
ದೇಶ

ರೈಲು ಪ್ರಯಾಣ ದರ ಇಳಿಕೆ ಸಾಧ್ಯತೆ: ಸಚಿವ ಸೋಮಣ್ಣ ಸುಳಿವು

Share
2 Min Read
SHARE

newsics.com
ಬೆಂಗಳೂರು: ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಅಗತ್ಯವಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಡ, ಮಧ್ಯಮ ವರ್ಗದ ಜನರೂ ವಂದೇ ಭಾರತ್ ರೈಲಿನಲ್ಲಿ ಓಡಾಡುವಂತೆ ಟಿಕೆಟ್‌ ದರ ಪರಿಷ್ಕರಣೆ ಮಾಡುತ್ತೇವೆ. ರೈಲು ಟಿಕೆಟ್ ದರ ಪರಿಷ್ಕರಣೆ ಸಂಬಂಧ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚೆ ಮಾಡಿದ್ದೇವೆ ಎಂದರು.

ರೈಲ್ವೆ ಅಂಡರ್‌ಪಾಸ್, ಮೇಲ್ಸೇತುವೆ ಕಾಮಗಾರಿಗೆ ಹಣ ಕೊಡಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸಮಪಾಲು ಹಣ ನೀಡಬೇಕಾಗುತ್ತದೆ. ಬೆಂಗಳೂರು ಕಂಟೋನ್ಮೆಂಟ್ ಸ್ಟೇಷನ್ ಯೋಜನಾ ಮೊತ್ತ 485 ಕೋಟಿ ರೂ. ಯಶವಂತಪುರ ನಿಲ್ದಾಣದ ಯೋಜನಾ ಮೊತ್ತ 387 ಕೋಟಿ ರೂ. ಎಂದು ಹೇಳಿದರು.

ಯಶವಂತಪುರ-ಚನ್ನಸಂದ್ರ ನಡುವೆ 25 ಕಿ.ಮೀ ಮತ್ತು ಬೈಯ್ಯಪ್ಪನಹಳ್ಳಿ-ಹೊಸೂರು ನಡುವೆ 48 ಕಿ.ಮೀ. ಹಳಿ ಡಬ್ಲಿಂಗ್ ಯೋಜನೆಗೆ 814 ಕೋಟಿ ರೂಪಾಯಿ ವೆಚ್ಚವಾಗಲಿದೆ. ರೈಲ್ವೆ ಓವರ್ ಬ್ರಿಡ್ಜ್, ಅಂಡರ್‌ಪಾಸ್‌ನಲ್ಲಿ ತೊಂದರೆ ಆಗಲು ಬಿಡಲ್ಲ ಎಂದು ಸೋಮಣ್ಣ ಹೇಳಿದರು.

ಇನ್ನೆರಡು ವರ್ಷಗಳಲ್ಲಿ ಕರ್ನಾಟಕ ವಿಭಿನ್ನ ರೀತಿಯಲ್ಲಿ ರೈಲ್ವೆ ವಿಭಾಗದಲ್ಲಿ ಅಭಿವೃದ್ಧಿ ಹೊಂದಲಿದೆ. ಹಿಂದೆ ರೈಲ್ವೆ ಅಂಡರ್ ಪಾಸ್ ಮತ್ತು ಮೇಲ್ಸೇತುವೆಗಳಿಗೆ ಕೇಂದ್ರ ಮತ್ತು ರಾಜ್ಯ ಸಹಯೋಗ ಇರುತ್ತಿತ್ತು. ಇದು ಎಷ್ಟರಮಟ್ಟಿಗೆ ಕಾರ್ಯೋನ್ಮುಖ ಆಗುತ್ತಿತ್ತೋ ಗೊತ್ತಿಲ್ಲ. ರೈಲುಗಳು ಬಂದಾಗ ಜನ, ಜಾನುವಾರುಗಳು ಪ್ರಾಣ ಕಳೆದುಕೊಳ್ಳುತ್ತಿದ್ದವು ಎಂದು ಹೇಳಿದ್ದಾರೆ.

ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗಕ್ಕೆ 3 ಡಿಸಿ ನೇಮಕಾತಿ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಜತೆ ಮಾತನಾಡಿದ್ದೇನೆ. 40 ತಿಂಗಳಲ್ಲಿ ಸಬ್ಅರ್ಬನ್ ಯೋಜನೆ ಮುಗಿಸುವುದಾಗಿ ಹೇಳಲಾಗಿತ್ತು. 2022ರಲ್ಲಿ ಮೋದಿ ಚಾಲನೆ ಕೊಟ್ಟಾಗ 40 ತಿಂಗಳು ಎಂದು ಹೇಳಲಾಗಿತ್ತು. ನಮ್ಮ ನಿರೀಕ್ಷೆಯಂತೆ ಸಬ್ಅರ್ಬನ್ ರೈಲು ಯೋಜನೆ ಕೆಲಸ ನಡೆಯುತ್ತಿಲ್ಲ. ಮುಂದಿನ ತಿಂಗಳು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬಂದು ಪರಿಶೀಲಿಸುತ್ತಾರೆ. 11,800 ಕೋಟಿ ರೂ. ಪೈಕಿ ರಾಜ್ಯ ಸರ್ಕಾರ ಇನ್ನೂ 5 ಕೋಟಿ ರೂ. ಕೊಡಬೇಕು. ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ 5 ಕೋಟಿ ರೂ. ಬಾಕಿ ಕೊಡಬೇಕಿದೆ ಎಂದು ಸೋಮಣ್ಣ ಹೇಳಿದರು.

ಹಠಾತ್ ಪ್ರವಾಹ: ನದಿ ದಾಟುತ್ತಿದ್ದ ಐವರು ಯೋಧರು ನೀರುಪಾಲು

ಶಾಂತಂ ಪಾಪಂ ಟೆಲಿ ಸರಣಿಯಲ್ಲಿ ನಟ ದರ್ಶನ್ ಕಥೆ! ಏನಿದು ಡೇರ್ ಡೆವಿಲ್ ದೇವದಾಸ್ ಕಹಾನಿ?

ಆಗಸ್ಟ್ 21ರಿಂದ UGC- NET ಪರೀಕ್ಷೆ: ಸಿಬಿಟಿ ಮೋಡ್‌ನಲ್ಲಿ ಎಕ್ಸಾಂ

TAGGED:#Rail fares #decrease #Minister Somanna hints #India #newsics
Share This Article
Facebook Twitter Copy Link Print
Previous Article ಸ್ಯಾಂಟೋರಿನಿ ದ್ವೀಪ ಸಮುದ್ರದಲ್ಲಿ ಹನಿಮೂನ್; ಫೋಟೋ ಹಂಚಿಕೊಂಡ ವಿಜಯ ಮಲ್ಯ ಮಗ ಸಿದ್ಧಾಥ್ ಮಲ್ಯ
Next Article ದರ್ಶನ್ ಫ್ಯಾನ್ಸ್‌ಗಳಿಂದ ಬ್ಯಾಡ್ ಕಮೆಂಟ್ಸ್ ಟಾರ್ಚರ್; ಅಳಲು ತೋಡಿಕೊಂಡ ಸೋನು ಗೌಡ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?