Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ugadi festival ಯುಗಾದಿ ಹಬ್ಬದ ಇತಿಹಾಸ ಮತ್ತು ಆಚರಣೆಯ ಮಹತ್ವ
ಕರ್ನಾಟಕಪ್ರಮುಖ

Ugadi festival ಯುಗಾದಿ ಹಬ್ಬದ ಇತಿಹಾಸ ಮತ್ತು ಆಚರಣೆಯ ಮಹತ್ವ

Share
2 Min Read
SHARE

newsics.com

ದಕ್ಷಿಣ ಭಾರತದಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಕೂಡ ಒಂದು. ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಸೇರಿದಂತೆ ಇನ್ನಿತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಯುಗಾದಿ ಹಬ್ಬವನ್ನು ಹಲವೆಡೆ ಉಗಾದಿ ಎಂತಲೂ ಕರೆಯುತ್ತಾರೆ.

ಈ ಹಬ್ಬವನ್ನು ಹಿಂದೂಗಳು ಚೈತ್ರ ಮಾಸದ ಮೊದಲ ದಿನದಂದು ಆಚರಿಸುತ್ತಾರೆ.

ಈ ಹಬ್ಬವು ವಸಂತ ಕಾಲದ ಆಗಮನವನ್ನು ಸೂಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಹಳ ವಿಜೃಂಭಣೆಯಿಂದ ಯುಗಾದಿಯನ್ನು ಆಚರಿಸುತ್ತಾರೆ. ಯುಗ ಮತ್ತು ಆದಿ ಎನ್ನುವ ಎರಡು ಸಂಸ್ಕೃತ ಪದಗಳಿಂದ ರೂಪುಗೊಂಡ ಈ ಯುಗಾದಿಯು ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಈ ವರ್ಷ ಯುಗಾದಿಯನ್ನು ಏಪ್ರಿಲ್‌ 09 ರಂದು ಮಂಗಳವಾರ ಆಚರಿಸಲಾಗುವುದು. ಈ ದಿನದ ಶುಭ ಮುಹೂರ್ತ, ಮಹತ್ವ ಮತ್ತು ಪೂಜೆ ವಿಧಿ – ವಿಧಾನಗಳು ಹೀಗಿವೆ..

ಹಿಂದೂ ಪುರಾಣಗಳ ಪ್ರಕಾರ, ಈ ದಿನ, ಬ್ರಹ್ಮ ದೇವನು ಬ್ರಹ್ಮಾಂಡದ ಸೃಷ್ಟಿಯನ್ನು ಪ್ರಾರಂಭಿಸಿದನು. ಇಂದಿಗೂ ಆಂಧ್ರಪ್ರದೇಶದಂತಹ ರಾಜ್ಯದಲ್ಲಿ ಯುಗಾದಿಯಂದು ಬ್ರಹ್ಮ ದೇವನನ್ನು ಪೂಜಿಸುತ್ತಾರೆ ಮತ್ತು ಈ ದಿನದಂದು ಭಗವಾನ್ ವಿಷ್ಣುವು ಮತ್ಸ್ಯ ಅವತಾರದಲ್ಲಿ ಅವತರಿಸಿದನು. ಆ ಸಮಯವನ್ನು ಯುಗಾದಿ ಹಬ್ಬವೆಂದು ಆಚರಿಸಲಾಗುತ್ತದೆ. ಭಾರತದಲ್ಲಿ ವಸಂತ ಋತು ಉತ್ತುಂಗದಲ್ಲಿರುವಾಗ ಮತ್ತು ರೈತರು ಹೊಸ ಬೆಳೆಯನ್ನು ಪಡೆದುಕೊಳ್ಳುವ ಸಮಯದಲ್ಲಿ ಯುಗಾದಿಯನ್ನು ಆಚರಿಸಲಾಗುವುದು.

ದಕ್ಷಿಣ ಭಾರತದಲ್ಲಿ ಯುಗಾದಿ ಹಬ್ಬಕ್ಕೆ ಹೆಚ್ಚಿನ ಮಹತ್ವವಿದೆ. ಈ ಹಬ್ಬವನ್ನು ಚೈತ್ರ ಮಾಸದ ಮೊದಲ ದಿನದಂದು ಆಚರಿಸಲಾಗುತ್ತದೆ. ಏಕೆಂದರೆ ಈ ಹಬ್ಬದ ಸಮಯದಲ್ಲಿ ವಸಂತ ಋತುವು ಆರಂಭವಾಗುತ್ತದೆ. ಈ ಕಾರಣದಿಂದಾಗಿ ಹವಾಮಾನವು ತುಂಬಾ ಆಹ್ಲಾದಕರವಾಗಿರುತ್ತದೆ, ಇದರೊಂದಿಗೆ, ಈ ಸಮಯದಲ್ಲಿ ಹೊಸ ಬೆಳೆಯ ಬಗ್ಗೆ ಜನರು ಮನಸ್ಸಿನಲ್ಲಿ ಸಂತೋಷವನ್ನು ಹೊಂದಿರುತ್ತಾರೆ.

ಈ ಕಾರಣಗಳಿಂದಾಗಿ ಯುಗಾದಿ ಹಬ್ಬದ ದಿನವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಯುಗಾದಿ ಹಬ್ಬವು ಜನರಿಗೆ ಅದೃಷ್ಟ, ಸಂಪತ್ತು ಮತ್ತು ಸಮೃದ್ಧಿಯನ್ನು ತರುತ್ತದೆ ಎನ್ನುವ ನಂಬಿಕೆಯಿದೆ. ಆದ್ದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿಯ ದಿನದಂದು ಜನರು ಅಂಗಡಿಗಳನ್ನು ತೆರೆಯುವುದು, ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವುದು ಮುಂತಾದ ಹೊಸ ಕೆಲಸಗಳನ್ನು ಪ್ರಾರಂಭಿಸುತ್ತಾರೆ.

ಯುಗಾದಿ ಹಬ್ಬದ ಮುಂಜಾನೆ ಬೇಗ ಎದ್ದು ಕಡಲೆ ಹಿಟ್ಟನ್ನು ಮತ್ತು ಎಣ್ಣೆಯನ್ನು ಮೈಗೆ ಹಚ್ಚಿಕೊಂಡು ಸ್ನಾನ ಮಾಡಬೇಕು.
– ನಂತರ ಕೈಯಲ್ಲಿ ಶ್ರೀಗಂಧ, ಅಕ್ಷತೆ, ಹೂವುಗಳು ಮತ್ತು ನೀರನ್ನು ತೆಗೆದುಕೊಂಡು ಬ್ರಹ್ಮದೇವನ ಮಂತ್ರಗಳನ್ನು ಪಠಿಸುತ್ತಾ ಬ್ರಹ್ಮದೇವನ ಪೂಜೆಯನ್ನು ಮಾಡಬೇಕು.

ಯುಗಾದಿ ಹಬ್ಬದ ಪೂಜೆ ವಿಧಾನ:

– ಈ ದಿನ ಮನೆಯ ಮುಂದೆ ವಿಶೇಷವಾದ ರಂಗೋಲಿಗಳನ್ನು ಹಾಕುತ್ತಾರೆ ಅಥವಾ ಸ್ವಸ್ತಿಕ ಚಿಹ್ನೆಯನ್ನು ಹಾಕುತ್ತಾರೆ. ಯುಗಾದಿಯಂದು ಇದನ್ನು ಮನೆಯ ಮುಂದೆ ಹಾಕುವುದರಿಂದ ಆ ಮನೆಗೆ ಧನಾತ್ಮಕ ಶಕ್ತಿಗಳ ಆಗಮನವಾಗುತ್ತದೆ ಎನ್ನುವ ನಂಬಿಕೆಯಿದೆ.
ಈ ದಿನ, ವಿಶೇಷ ಪಾನೀಯವನ್ನು ತಯಾರಿಸುವುದು ಸಹ ವಾಡಿಕೆ. ಇದನ್ನು ಪಚಡಿ ಎಂದು ಕರೆಯಲಾಗುತ್ತದೆ. ಪಚಡಿ ಎಂಬ ಈ ಪಾನೀಯವನ್ನು ಹೊಸ ಹುಣಸೆಹಣ್ಣು, ಮಾವು, ತೆಂಗಿನಕಾಯಿ, ಬೇವಿನ ಹೂವುಗಳು, ಬೆಲ್ಲದಂತಹ ವಸ್ತುಗಳನ್ನು ಬೆರೆಸಿ ಮಡಕೆಯಲ್ಲಿ ತಯಾರಿಸಲಾಗುತ್ತದೆ. ಈ ಪಾನೀಯವನ್ನು ಕುಟುಂಬದ ಸದಸ್ಯರು ಕುಡಿಯುವುದು ಮಾತ್ರವಲ್ಲದೇ, ಎಲ್ಲರಿಗೂ ಹಂಚಲಾಗುತ್ತದೆ.
– ಈ ದಿನ ನೀವು ಬ್ರಹ್ಮ ದೇವನ ಬದಲು ನಿಮ್ಮ ನೆಚ್ಚಿನ ದೇವರನ್ನು ಅಥವಾ ನಿಮ್ಮ ಮನೆ ದೇವರನ್ನು ಕೂಡ ಪೂಜಿಸಿ ಆಶೀರ್ವಾದವನ್ನು ಪಡೆದುಕೊಳ್ಳಬಹುದು

Today’s prediction ಯುಗಾದಿ ಶುಭ ತರಲಿ… ಇಂದಿನ ರಾಶಿ ಭವಿಷ್ಯ 30-03-2025,‌ ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:History and importance of Ugadi festival
Share This Article
Facebook Twitter Copy Link Print
Previous Article Congress ಕಾಂಗ್ರೆಸ್ ಗೆ ಮತ ಹಾಕಿಸಿದ್ದಕ್ಕೆ ಯುವತಿ ಮೇಲೆ ಮಾರಣಾಂತಿಕ ಹಲ್ಲೆ
Next Article Astro ಯುಗಾದಿ ವರ್ಷ ಭವಿಷ್ಯ 2025: ನಿಮ್ಮ ರಾಶಿ ಗ್ರಹಗತಿ ಹೇಗಿದೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?