newsics.com
ನವದೆಹಲಿ: ಕರ್ನಾಟಕ ಸೇರಿದಂತೆ ದೇಶಾದ್ಯಂತ ಏಪ್ರಿಲ್-ಜೂನ್ ನಲ್ಲಿ ಅಧಿಕ ಬಿಸಿಲು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ.
ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್ಗಢ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ಮತ್ತು ತಮಿಳುನಾಡಿನ ಉತ್ತರ ಭಾಗಗಳಲ್ಲಿ ಹೆಚ್ಚಿನ ಬಿಸಿಲು ದಾಖಲಾಗುವ ಸಾಧ್ಯತೆಯಿದೆ.
ಏಪ್ರಿಲ್ನಿಂದ ಜೂನ್ವರೆಗೆ ಉತ್ತರ ಮತ್ತು ಪೂರ್ವ ಭಾರತ, ಮಧ್ಯಭಾರತದ ಬಹುತೇಕ ಭಾಗಗಳು ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳು ಸಾಮಾನ್ಯಕ್ಕಿಂತ ಎರಡರಿಂದ ನಾಲ್ಕು ಪಟ್ಟು ಬಿಸಿಗಾಳಿ ಇರುವ ಸಾಧ್ಯತೆಯಿದೆ.
https://www.newsics.com/2025/03/31/woman-knocks-down-robber-in-half-an-hour/