newsics.com
ಚಾಮರಾಜನಗರ: ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು , ಕೇರಳ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮೈಸೂರು ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ ಬೆಂಡಗಳ್ಳಿ ಗೇಟ್ ಸಮೀಪ ಮಂಗಳವಾರ ಸಂಭವಿಸಿದೆ.
ಕೇರಳ ಮೂಲದ ಶಾಷಿದ್ (30) ಹಾಗೂ ಮುಷ್ಕಾನ್ (19) ಮೃತರು. ಇವರ ಜೊತೆಗಿದ್ದ ಶಾಜೀಯಾ ಎಂಬುವರಿಗೆ ತೀವ್ರ ಪೆಟ್ಟಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಟಿಟಿ ವಾಹನ ಚಾಲಕ ನಂಜನಗೂಡಿನ ನಗರ್ಲೆ ಗ್ರಾಮದ ಸಾಗರ್ (32) ಎಂಬಾತನ ಕಾಲು ಮುರಿದಿದೆ. ಘಟನೆಯಲ್ಲಿ ಉಳಿದ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂಜನಗೂಡಿನಿಂದ ಊಟಿಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ರಂಜಾನ್ ಪ್ರವಾಸಕ್ಕಾಗಿ ಮೈಸೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಕೇರಳ ಮೂಲದ ಒಂದೇ ಕುಟುಂಬದ 8 ಮಂದಿ ಮಕ್ಕಳೊಡನೆ ಹೋಗುತ್ತಿದ್ದರು. ಇದರಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟಿಟಿ ವಾಹನದಲ್ಲಿ ತೆರಳುತ್ತಿದ್ದ ಚಾಲಕ ಸೇರಿ ಸುಮಾರು 5ರಿಂದ 6 ಮಂದಿಗೆ ಗಾಯಗೊಂಡಿದ್ದಾರೆ.